Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ – ಜೆಡಿಎಸ್ ಮೈತ್ರಿ ಬ್ಯಾಕ್ ಫೈರ್ ಆಗಬಹುದು : ಸಂಸದೆ ಸುಮಲತಾ‌

Facebook
Twitter
Telegram
WhatsApp

 

ಮಂಡ್ಯ: ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಮಾಡಿಕೊಂಡಿರುವ ಮೈತ್ರಿ ಸ್ವತಃ ಕಾರ್ಯಕರ್ತರಿಗೇನೆ ಇಷ್ಟವಿಲ್ಲ. ಈ ಸಂಬಂಧ ಅಸಮಾಧಾನವಾನ್ನ ಈಗಾಗಲೇ ಹೊರ ಹಾಕಿದ್ದಾರೆ. ಆದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೆಡಿಎಸ್ ಮೈತ್ರಿಯನ್ನು ಮುಂದುವರೆಸಿದೆ. ಇದೀಗ ಈ ಮೈತ್ರಿ ಬಗ್ಗೆ ಸಂಸದೆ ಸುಮಲತಾ‌ ಮಾತನಾಡಿದ್ದಾರೆ.

 

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಸುಮಲತಾ‌ ಗೆಲುವು ಸಾಧಿಸಿ, ಸಂಸದೆಯಾದರು. ಈ ಬಾರಿಯೂ ಮಂಡ್ಯ ಕ್ಷೇತ್ರದಿಂದಾನೇ ನಿಲ್ಲುವ ಬಯಕೆ ಅವರದ್ದು. ಬಿಜೆಪಿಗೂ ಸೇರಿದ್ದಾರೆ. ಮೈತ್ರಿ ವಿಚಾರ ಈ ಮೊದಲು ಯಾರು ಯೋಚನೆ ಕೂಡ ಮಾಡಿರಲಿಲ್ಲ. ಜೆಡಿಎಸ್ ಗೆ ಮಂಡ್ಯ ಅನಿವಾರ್ಯ. ಸುಮಲತಾಗೂ ಅನಿವಾರ್ಯವಾಗಿದೆ. ಹೀಗಾಗಿ ಮೈತ್ರಿಯಲ್ಲಿ ಹೇಗೆ ಹಂಚಿಕೆ ಮಾಡಿಕೊಳ್ಳುತ್ತಾರೆ ಎಂಬುದು ಮಾತ್ರ ತಿಳಿದಿಲ್ಲ.

ಈ ಸಂಬಂಧ ಇಂದು ಮಾತನಾಡಿರುವ ಸುಮಲತಾ, ಮೈತ್ರಿಯ ಮಾತುಕತೆ ನಡೆಸುವ ಮೊದಲಾಗಲೀ ಅಥವಾ ನಂತರವಾಗಲೀ ತನ್ನನ್ನು ಯಾರೂ ಸಂಪರ್ಕಿಸಿಲ್ಲ. ಬಿಜೆಪಿಗೆ ನನ್ನ ಬೆಂಬಲ ಈಗ ಇದೆ.‌ ಮುಂದೆಯೂ ಇರಬಹುದು. ಆದರೆ ಪಕ್ಷಕ್ಕಾಗಿ ಮೊದಲಿನಿಂದಲೂ ದುಡಿದು ಬಂದಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ವಿಚಾರ ವಿನಿಮಯ ಮಾಡದೆ ದೋಸ್ತಿ ಬೆಳೆಸಿದ್ದು ಸೂಕ್ತವಲ್ಲ ಎಂದಿದ್ದಾರೆ.

 

ತನಗಿಂತಲೂ ಮೊದಲು ಬಿಜೆಪಿಗಾಗಿ ಕೆಲಸ ಮಾಡುತ್ತಾ ಬಂದಿರುವ ಶಾಸಕ ಕೆ ಸಿ ನಾರಾಯಣ ಗೌಡ ಅವರಿಗೆ ಇಲ್ಲಿ‌ನ ಜನರ ನಾಡಿಮಿಡಿತ ಚೆನ್ನಾಗಿಯೇ ಗೊತ್ತಿರುತ್ತೆ. ಜನ ಏನು ಬಯಸುತ್ತಾರೆ ಎಂಬುದನ್ನು ಅವರು ತಿಳಿದಿರುತ್ತಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೈತ್ರಿ ಮಾತುಕತೆ ಮಾಡಬೇಕಿತ್ತು. ಆದರೆ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮಾಡಿಕೊಂಡಿರುವ ಈ ಮೈತ್ರಿ ಬ್ಯಾಕ್ ಫೈಯರ್ ಆಗಬಹುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!