Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೂಡಾದಲ್ಲಿ ಬಿಜೆಪಿ-ಜೆಡಿಎಸ್ ನದ್ದೂ ಹಗೆಣಗಳಿವೆ.. ಕಾಂಗ್ರೆಸ್ ಯಾಕೆ ಮಾತಾಡ್ತಿಲ್ಲ : ಪ್ರತಾಪ್ ಸಿಂಹ ಪ್ರಶ್ನೆ..!

---Advertisement---

 

 

ಹಾಸನ: ಸದ್ಯ ರಾಜ್ಯ ರಾಜಕೀಯದಲ್ಲಿ ಮೂಡಾ ಹಗರಣ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ ಅವರ ಖುರ್ಚಿಗೆ ಕಂಟಕ ತಂದಿರುವಂತ ಕೇಸ್ ಇದಾಗಿದೆ. ಸದ್ಯ ಕೋರ್ಟ್ ನಲ್ಲಿ ಈ ಕೇಸ್ ಸಂಬಂಧ ವಿಚಾರಣೆ ನಡೆಯುತ್ತಿದೆ. ಈ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಮೂಡಾ ವಿಚಾರದಲ್ಲಿ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನವರದ್ದೂ ಹಗರಣಗಳಿವೆ ಎಂದಿದ್ದಾರೆ.

ಹಾಸನದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಎಲ್ಲಾ ಪಕ್ಷದ ನಾಯಕರು ಅಡ್ಜೆಸ್ಟ್ಮೆಂಟ್ ರಾಜಕೀಯ ಮಾಡಿಕೊಂಡಿದ್ದಾರೆ. ಮೂಡಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನವರದ್ದು ಹಗರಣಗಳಿವೆ. ಆದರೆ ಈ ಬಗ್ಗೆ ಕಾಂಗ್ರೆಸ್ ನವರು ಯಾಕೆ ಮಾತನಾಡುತ್ತಿಲ್ಲ ಎಂಬುದು ಗೊತ್ತಿಲ್ಲ. ಅವರು ಮಾಡಿರುವ ಆರೋಪಗಳಿಗೆ ಕಾಂಗ್ರೆಸ್ ನವರು ಒಂದು ಸಾಕ್ಷಿಯನ್ನಾದರೂ ಕೊಟ್ಟಿದ್ದಾರಾ..? ಆಡಳಿತ, ಪೊಲೀಸ್ ವ್ಯವಸ್ಥೆ ಅವರ ಬಳಿಯೇ ಇದೆ ಎಂದು ಪ್ರಶ್ನೆ ಮಾಡಿದ್ದಾರೆ.

ನಾನು ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಇದ್ದೀನಿ. ದೆಹಲಿಗೆ ಹೋಗಬೇಡ ಎಂದರೆ ಇಲ್ಲೆ ಇರು ಅಂತ ಅರ್ಥ ಅಲ್ಲವಾ. ಮೈಸೂರು ನನ್ನ ಕರ್ಮ ಭೂಮಿ ಅಲ್ಲಿಯೇ ಇರುತ್ತೀನಿ. ಅಲ್ಲಿಯೇ ರಾಜಕಾರಣ ಮಾಡುತ್ತೀನಿ ಎಂದಿದ್ದಾರೆ. ಇದೇ ವೇಳೆ 40% ಕಮಿಷನ್ ಬಗ್ಗೆಯೂ ಮಾತನಾಡಿದ ಪ್ರತಾಪ್ ಸಿಂಹ, ತನಿಖಾ ಏಜೆನ್ಸಿ, ಅವರ ಹತ್ತಿರವೇ ಇದೆ. ಹಗರಣದ ಬಗ್ಗೆ ತನಿಖೆ ಮಾಡಿಸಲಿ. ಪ್ರಿಯಾಂಕ್ ಖರ್ಗೆ ಬಳಿ ದಾಖಲೆಗಳಿದಾವೆ ಎನ್ನುತ್ತಾರೆ. ದಾಖಲೆ ಇದ್ರೆ ಇಟ್ಕೊಂಡು ಏನು ಮಾಡುತ್ತೀರಿ. ಕರ್ನಾಟಕ ಸರ್ಕಾರವೇ ನಿಮ್ಮ ಕೈಲಿದೆ. ಯಾವ್ಯಾವ ಹಗರಣಗಳು ಇದಾವೇ ಎಲ್ಲಾ ಹಗರಣದ ಬಗ್ಗೆಯೂ ತನಿಖೆ ಮಾಡಿಸಿ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...