Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ವಿಚಾರ : ಡಿಕೆಶಿಗೆ ತಿರುಗೇಟು ನೀಡಿದ ಸಿಟಿ ರವಿ..!

Facebook
Twitter
Telegram
WhatsApp

ಚಿಕ್ಕಮಗಳೂರು: ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದದ ಮೇಲೆಯೇ ಚುನಾವಣೆ ಎದುರಿಸುತ್ತಿದ್ದಾರೆ ಎಂಬ ಮಾತನ್ನ ಕಾಂಗ್ರೆಸ್ ನವರು ಆಗಾಗ ಹೇಳ್ತಾನೆ ಇದ್ದಾರೆ. ಇದೇ ವಿಚಾರವನ್ನ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕೂಡ ಹೇಳಿದ್ದರು. ಇದೀಗ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಸಿ ಟಿ ರವಿ ತಿರುಗೇಟು ನೀಡಿದ್ದಾರೆ. ಅವರ ಸಹಾಯವಿಲ್ಲದೆ ಡಿಕೆ ಬ್ರದರ್ಸ್ ಗೆಲ್ಲುತ್ತಿರಲಿಲ್ಲ ಎಂದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ ಟಿ ರವಿ, ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಳ್ಳದೆ ಇದ್ದಿದ್ರೆ ಡಿಕೆಶಿ ಕೂಡ ಶಾಸಕರಾಗುತ್ತಿರಲಿಲ್ಲ. ಬಿಜೆಒಇ ವೀಕ್ ಆಗಿದೆ ಅಂತ ಡಿಕೆಶಿ ಹೇಳ್ತಾರೆ. ಜೆಡಿಎಸ್ ಸಪೋರ್ಟ್ ಇಲ್ಲದೆ ಹೋಗಿದ್ದರೆ ಡಿಕೆ ಬ್ರದರ್ಸ್ ಗೆಲ್ಲುತ್ತಿರಲಿಲ್ಲ. ಜೆಡಿಎಸ್ ನಲ್ಲಿ ಕೆಲವು ಮತಗಳಿವೆ. ಹೀಗಾಗಿ ಬೆಂಬಲ ಕೇಳಿದ್ದೇವೆ. ಅದನ್ನ ಹೊರತುಪಡಿಸಿ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಯಾವ ಒಳ ಒಪ್ಪಂದವೂ ಆಗಿಲ್ಲ. ನಮ್ಮ ಅವರ ನಡುವೆ ಇರುವುದು ಸಂಬಂಧ ಯಾವ ಒಪ್ಪಂದವೂ ಅಲ್ಲ ಎಂದಿದ್ದಾರೆ.

ಇನ್ನು ಸಮ್ಮಿಶ್ರ ಸರ್ಕಾರವಿದ್ದಾಗ ಕುಮಾರಸ್ವಾಮಿಯವರನ್ನುಸಿಎಂ ಸ್ಥಾನದಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿದ ಸಿ ಟಿ ರವಿ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರನ್ನ ಕೆಳಗಿಳಿಸಿದ್ದು ಯಾರು..? ಕೆಳಗಿಳಿಸಲು ಅವರನ್ನು ಕಳುಹಿಸಿದ್ದು ಯಾರು..? ಕೂರಿಸಿದ್ದು ಅವರೇ ಕಡೆಗೆ ಕೆಳಗಿಳಿಸಿದ್ದು ಅವರೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!