Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿ ಮುಖಂಡ ಎಚ್.ಟಿ.ಬಳೇಗಾರ್ ನಿಧನ

---Advertisement---

 

ಸುದ್ದಿಒನ್, ಶಿವಮೊಗ್ಗ, ಜನವರಿ. 03 : ರಾಜ್ಯ ಬಿಜೆಪಿ ಹಿರಿಯ ಮುಖಂಡ, ಕರ್ನಾಟಕ ರಾಜ್ಯ ಉಗ್ರಾಣ ನಿಮಗದ ಮಾಜಿ ಅಧ್ಯಕ್ಷ ಎಚ್.ಟಿ.ಬಳೇಗಾರ್ (73) ಬೆಂಗಳೂರಿನಲ್ಲಿ ಗುರುವಾರ ನಿಧನರಾದರು.

ಮೃತರಿಗೆ ಪುತ್ರಿಯರಾದ ಐಶ್ವರ್ಯಾ, ಭೂಮಿಕಾ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶಿಕಾರಿಪುರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ನೂರಾರು ಸಂಖ್ಯೆಯಲ್ಲಿ ವಿವಿಧ ಪಕ್ಷದ ಮುಖಂಡರು ಅಂತಿಮ ದರ್ಶನ ಪಡೆದರು. ಬಳಿಕ ಅಂತ್ಯಕ್ರಿಯೆ ನಡೆಯಿತು.

ಸಂತಾಪ: ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಬಳೇಗಾರ್ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕೆ ಇಳಿಸುವ ಹಾಗೂ ರಾಜ್ಯಾದ್ಯಂತ ನಾಯಕ ಸಮುದಾಯದ ಸಂಘಟನೆ ಹೊಣೆ ವಹಿಸುವ ಉದ್ದೇಶವನ್ನು ಮುಖಂಡರು
ಹೊಂದಿದ್ದರು. ಆದರೆ, ಈಗ ಅವರ ಅಕಾಲಿಕ ಸಾವು ಪಕ್ಷ ಹಾಗೂ ಬೆಂಬಲಿಗರಿಗೆ ಹೆಚ್ಚು ನಷ್ಟವನ್ನುಂಟು ಮಾಡಿದೆ. ಯುವ ಪೀಳಿಗೆಯನ್ನು ಬೆಳೆಸುವ ಮಹಾದಾಸೆ ಹೊಂದಿದ್ದ ಅವರ ನಿಧನ ದೊಡ್ಡ ನಷ್ಟವಾಗಿದೆ. ಕುಟುಂಬ ಹಾಗೂ ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ದೇವರ ದಯಪಾಲಿಸಲಿ ಎಂದು ಚಿತ್ರದುರ್ಗದ ಉದ್ಯಮಿ ಟಿ.ಸಿದ್ದೇಶ್, ಮುಖಂಡರಾದ ಪಿ.ಎಲ್. ಪರಶುರಾಮ್, ಕೃಷ್ಣಮೂರ್ತಿ, ವಜ್ರಮೂರ್ತಿ ಇತರರು ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...