ಸುದ್ದಿಒನ್, ಶಿವಮೊಗ್ಗ, ಜನವರಿ. 03 : ರಾಜ್ಯ ಬಿಜೆಪಿ ಹಿರಿಯ ಮುಖಂಡ, ಕರ್ನಾಟಕ ರಾಜ್ಯ ಉಗ್ರಾಣ ನಿಮಗದ ಮಾಜಿ ಅಧ್ಯಕ್ಷ ಎಚ್.ಟಿ.ಬಳೇಗಾರ್ (73) ಬೆಂಗಳೂರಿನಲ್ಲಿ ಗುರುವಾರ ನಿಧನರಾದರು.
ಮೃತರಿಗೆ ಪುತ್ರಿಯರಾದ ಐಶ್ವರ್ಯಾ, ಭೂಮಿಕಾ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶಿಕಾರಿಪುರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ನೂರಾರು ಸಂಖ್ಯೆಯಲ್ಲಿ ವಿವಿಧ ಪಕ್ಷದ ಮುಖಂಡರು ಅಂತಿಮ ದರ್ಶನ ಪಡೆದರು. ಬಳಿಕ ಅಂತ್ಯಕ್ರಿಯೆ ನಡೆಯಿತು.

ಸಂತಾಪ: ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಬಳೇಗಾರ್ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕೆ ಇಳಿಸುವ ಹಾಗೂ ರಾಜ್ಯಾದ್ಯಂತ ನಾಯಕ ಸಮುದಾಯದ ಸಂಘಟನೆ ಹೊಣೆ ವಹಿಸುವ ಉದ್ದೇಶವನ್ನು ಮುಖಂಡರು
ಹೊಂದಿದ್ದರು. ಆದರೆ, ಈಗ ಅವರ ಅಕಾಲಿಕ ಸಾವು ಪಕ್ಷ ಹಾಗೂ ಬೆಂಬಲಿಗರಿಗೆ ಹೆಚ್ಚು ನಷ್ಟವನ್ನುಂಟು ಮಾಡಿದೆ. ಯುವ ಪೀಳಿಗೆಯನ್ನು ಬೆಳೆಸುವ ಮಹಾದಾಸೆ ಹೊಂದಿದ್ದ ಅವರ ನಿಧನ ದೊಡ್ಡ ನಷ್ಟವಾಗಿದೆ. ಕುಟುಂಬ ಹಾಗೂ ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ದೇವರ ದಯಪಾಲಿಸಲಿ ಎಂದು ಚಿತ್ರದುರ್ಗದ ಉದ್ಯಮಿ ಟಿ.ಸಿದ್ದೇಶ್, ಮುಖಂಡರಾದ ಪಿ.ಎಲ್. ಪರಶುರಾಮ್, ಕೃಷ್ಣಮೂರ್ತಿ, ವಜ್ರಮೂರ್ತಿ ಇತರರು ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








