Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ಎಲ್ಲೂ ಹೋಗಲ್ಲ.. ವಲಸಿಗರ ಸ್ಪಷ್ಟನೆ..!

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಸಚಿವರು ಸಂಪರ್ಕದಲ್ಲಿದ್ದಾರೆ ಅನ್ನೋ ಮಾತು ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಅದ್ಯಾವಾಗ ಬಿಜೆಪಿಗರು ನಮ್ಮ ಸಂಪರ್ಕದಲ್ಲಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿದ್ರೋ ಏನೋ ಆಗಿನಿಂದ ಬಿಜೆಪಿಗರಲ್ಲೂ ಗೊಂದಲ. ಯಾರಿರಬಹುದು ಎಂಬುದೇ ಪ್ರಶ್ನೆ. ಇದು ವಲಸಿಗರೇನಾದ್ರೂ ಮತ್ತೆ ಹೋಗ್ತಾರಾ ಎಂಬ ಅನುಮಾನಗಳು ಮೂಡಿದ್ದವು.

ಇದೀಗ ಇಂದು ನಡೆದ ಸಂಪುಟ ಸಭೆಯಲ್ಲಿ ವಲಸಿಗರೇ ಇದಕ್ಕೆ ಉತ್ತರ ನೀಡಿದ್ದಾರೆ. ನಾವೂ ಮತ್ತೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ. ಬಿಜೆಪಿಯಲ್ಲೇ ಇರುತ್ತೇವೆ. ನಾವೂ ಕಾಂಗ್ರೆಸ್ ಗೆ ಹೋಗ್ತೇವೆ ಅನ್ನೋ ಮಾತಿದೆ. ಆದ್ರೆ ನಾವೂ ಎಲ್ಲಿಯೂ ಹೋಗಲ್ಲ.

ನಮ್ಮನ್ನ ಯಾವಾಗಲೂ ವಲಸಿಗರು ಅಂತಾನೆ ಕರೆಯುತ್ತಾರೆ. ವಲಸಿಗರೆಂದರೆ ನಮಗೂ ಬೇಸರವಾಗುತ್ತೆ. ನಾವು ಎಲ್ಲು ಪಕ್ಷ ಬಿಟ್ಟು ಹೋಗಲ್ಲ. ಎಂದು ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ. ನಾವೂ ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದು ವಲಸಿಗ ಸಚಿವರು ಹೇಳಿದ್ದಾರೆ.

ವಲಸಿಗರ ಮಾತು ಕೇಳಿ ಸಿಎಂ ಬೊಮ್ಮಾಯಿ ಅವರು ಫುಲ್ ಖುಷಿಯಾಗಿದ್ದಾರೆ. ನಿಮಗೆ ನಮ್ಮ ಸಪೋರ್ಟ್ ಯಾವಾಗಲೂ ಇರುತ್ತೆ. ಯಾವುದೇ ಆತಂಕ ಬೇಡ. ನಿಮಗೆ ನಮ್ಮ ಬೆಂಬಲ ಯಾವಾಗಲೂ ಇರುತ್ತೆ. ನಿಮ್ಮ ಕೆಲಸದ ಬಗ್ಗೆ ವರಿಷ್ಟರಿಗೂ ಮೆಚ್ಚುಗೆ ಇದೆ ಎಂದು ವಲಸಿಗರಿಗೆ ಸಿಎಂ ಬೊಮ್ಮಾಯಿ ಅವರು ಆತ್ಮಸ್ಥೈರ್ಯ ತುಂಬಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!