Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋದಿ ದೇಶದ್ರೋಹಿ ಹೇಳಿಕೆಗೆ ಸದನದಲ್ಲಿ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು..!

---Advertisement---

 

ಬೆಂಗಳೂರು: ವಿಧಾನಪರಿಷತ್ ಅಧಿವೇಶನ ಆರಂಭವಾಗಿದೆ. ನಿನ್ನೆ ಮೋದಿ ದೇಶದ್ರೋಹಿ ಎಂಬ ಮಾತನ್ನ ಕಾಂಗ್ರೆಸ್ ಎಂಎಲ್ಸಿ ನಜೀರ್ ಅಹ್ಮದ್ ಹೇಳಿದ್ರು. ಈ ಹೇಳಿಕೆಯಿಂದ ದೊಡ್ಡಮಟ್ಟದ ಕೋಲಾಹಲ ಉಂಟಾಗಿತ್ತು. ಇದೀಗ ಇಂದು ಅಧಿವೇಶನ ಆರಂಭವಾದ ಬೆನ್ನಲ್ಲೇ ಪರಿಷತ್ ನಲ್ಲಿ ಮೋದಿ ದೇಶದ್ರೋಹಿ ವಿವಾದ ಚರ್ಚೆಗೆ ಬಂದಿದೆ.

ಬಿಜೆಪಿ ನಾಯಕರು ಈ ಹೇಳಿಕೆಗೆ ಕೆಂಡಾಮಂಡಲರಾಗಿದ್ದಾರೆ. ಈ ವಿಚಾರಕ್ಕೆ ಎಂಎಲ್ಸಿ ನಜೀರ್ ಅಹ್ಮದ್ ಕ್ಷಮೆಯಾಚನೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ನಜೀರ್ ಅಹ್ಮದ್ ಕ್ಷಮೆ ಕೇಳದೆ ಹೋದರೆ ಸದನದಿಂದ ಹೊರಹಾಕಬೇಕು ಎಂಬ ಒತ್ತಡವೂ ಕೇಳಿ ಬಿಜೆಪಿ ನಾಯಕರಿಂದ ಕೇಳಿ ಬರ್ತಾ ಇದೆ.

ಭಾರತೀಯರ ನಾಲಿಗೆ ಆಗಿದ್ದರೆ ಪ್ರಧಾನಿ ಬಗ್ಗೆ ಮಾತನ್ನಾಡುವುದಿಲ್ಲ. ಆದರ ಅದು ಪಾಕಿಸ್ತಾನದ ನಾಲಗೆಯಾಗಿರಬೇಕು ಅಂತ ಸಿಟಿ ರವಿ ಅವರು ಕೆಂಡಾಮಂಡಲರಾಗಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿದ್ದ ನಜೀರ್ ಅಹ್ಮದ್ ಅವರನ್ನು ಹೊರ ಹಾಕಿ ಎಂದು ಘೋಷಣೆ ಕೂಗಿದ್ದಾರೆ.

ವಿಶ್ಲೇಷಣೆ ನಮಗೆ ಬೇಡ. ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದರೆ, ನೀವ್ಯಾರು ಅವರನ್ನ ಹೊರ ಹಾಕಿ ಅಂತ ಹೇಳೋದಕ್ಕೆ ಅಂತ ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡಿದ್ದಾರೆ. ಹಾಗಾದ್ರೆ ನೀವೇ ಸಭಾಪತಿ ಸ್ಥಾನದಲ್ಲಿ ಕೂತು ಬಿಡಿ ಎಂದು ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಮಾತನಾಡೋದಕ್ಕೆ ಅವಕಾಶ ಇಲ್ಲ. ಮಾಡಿದ ತಪ್ಪಿಗೆ ಕ್ಷಮೆ ಕೇಳಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹ ಮಾಡಿದ್ದಾರೆ.

ಸನ್ಮಾನ ರವಿ ಅವರು ಇದು ಪಾಕಿಸ್ತಾನದ ನಾಲಿಗೆಯ ಇದು ಅಂದ್ರು. ನಾವೂ ಹುಟ್ಟಿ ಬೆಳೆದಿರುವುದು ಕರ್ನಾಟಕದಲ್ಲಿ. ನಾವೇನು ಪಾಕಿಸ್ತಾನದಲ್ಲಿ ಹುಟ್ಟಿ ಬಂದಿದ್ದೀವಾ ಅಂತ ನಜೀರ್ ಅಹ್ಮದ್ ಹೇಳಿದ್ರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now