Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

---Advertisement---

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅದರಲ್ಲೂ ತಮ್ಮದೇ ಪಕ್ಷದವರಿಗೆ ಎಂಬುದು ಆಶ್ಚರ್ಯಕರ ಸಂಗತಿ, ಆತಂಕಕಾರಿ ವಿಚಾರ‌.

ಆರ್.ಅಶೋಕ್ ಅವರಿಗೇನೆ ಇದು ದಿಗಿಲು ಬಡಿಸಿದೆ. ಎಂಥವರಿಗೆ ಆಗಲಿ ಏಡ್ಸ್ ಸೋಂಕಿತರ ರಕ್ತ ಇಂಜೆಕ್ಟ್ ಮಾಡಲು ಹೊರಟಿದ್ದರು ಎಂದರೆ ಭಯ ಆಗಲ್ವಾ. ಅಶೋಕ್ ಅವರಿಗೆ ಈ ವಿಚಾರ ತಿಳಿಯುತ್ತಿದ್ದ, ಮುನಿರತ್ನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಇದರ ಸತ್ಯಾಸತ್ಯತೆಯನ್ನು ಹೊರ ತರಬೇಕೆಂದು ಮನವಿ ಮಾಡಿದ್ದಾರೆ. ಇದರ ನಡುವೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರ ಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ @BJP4Karnataka ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಟ್ವೀಟ್ ಮಾಡಿದೆ. ಸದ್ಯಕ್ಕೆ ಶಾಸಕ ಮುನಿರತ್ನ, ಅತ್ಯಾಚಾರ ಆರೋಪದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಹೇಗೋ ಜಾಮೀನು ಪಡೆದಿದ್ದರು. ಹೊರ ಬರುತ್ತೇನೆ ಎಂದುಕೊಳ್ಳುವಾಗಲೇ ಮತ್ತೆ ಪೊಲೀಸರ ಬಳಿ ಲಾಕ್ ಆಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment