Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

Facebook
Twitter
Telegram
WhatsApp

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅದರಲ್ಲೂ ತಮ್ಮದೇ ಪಕ್ಷದವರಿಗೆ ಎಂಬುದು ಆಶ್ಚರ್ಯಕರ ಸಂಗತಿ, ಆತಂಕಕಾರಿ ವಿಚಾರ‌.

ಆರ್.ಅಶೋಕ್ ಅವರಿಗೇನೆ ಇದು ದಿಗಿಲು ಬಡಿಸಿದೆ. ಎಂಥವರಿಗೆ ಆಗಲಿ ಏಡ್ಸ್ ಸೋಂಕಿತರ ರಕ್ತ ಇಂಜೆಕ್ಟ್ ಮಾಡಲು ಹೊರಟಿದ್ದರು ಎಂದರೆ ಭಯ ಆಗಲ್ವಾ. ಅಶೋಕ್ ಅವರಿಗೆ ಈ ವಿಚಾರ ತಿಳಿಯುತ್ತಿದ್ದ, ಮುನಿರತ್ನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಇದರ ಸತ್ಯಾಸತ್ಯತೆಯನ್ನು ಹೊರ ತರಬೇಕೆಂದು ಮನವಿ ಮಾಡಿದ್ದಾರೆ. ಇದರ ನಡುವೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರ ಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ @BJP4Karnataka ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಟ್ವೀಟ್ ಮಾಡಿದೆ. ಸದ್ಯಕ್ಕೆ ಶಾಸಕ ಮುನಿರತ್ನ, ಅತ್ಯಾಚಾರ ಆರೋಪದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಹೇಗೋ ಜಾಮೀನು ಪಡೆದಿದ್ದರು. ಹೊರ ಬರುತ್ತೇನೆ ಎಂದುಕೊಳ್ಳುವಾಗಲೇ ಮತ್ತೆ ಪೊಲೀಸರ ಬಳಿ ಲಾಕ್ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಖಾಲಿ ನಿವೇಶನ ಸ್ವಚ್ಚಗೊಳಿಸಿ, ನಾಮಫಲಕ ಅಳವಡಿಸಿಕೊಳ್ಳಲು ಸೂಚನೆ

ಚಿತ್ರದುರ್ಗ. ಸೆ.20: ಚಿತ್ರದುರ್ಗ ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು ಅನೇಕ ಕಾರ್ಯಕ್ರಮ

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ

ತಿರುಪತಿ ಲಡ್ಡು ವಿವಾದ ಕೇಳಿ ಆಶ್ಚರ್ಯ ಆಯ್ತು : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸದ್ಯ ದೇಶದೆಲ್ಲೆಡೆ ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ವಿಚಾರವೇ ಸದ್ದು ಮಾಡುತ್ತಿದೆ. ಪ್ರಸಾದಕ್ಕೆ ಪ್ರಾಣಿ ಕೊಬ್ಬನ್ನು ಬಳಕೆ ಮಾಡುತ್ತಾರೆ ಎಂಬ ವಿಚಾರ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಇದೀಗ ಈ ಬಗ್ಗೆ ಕೆ.ಎಸ್.ಈಶ್ವರಪ್ಪ

error: Content is protected !!