Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾದವನಂದ ಶ್ರೀಗಳಿಗೆ ಅಯೋಧ್ಯೆ ಮಂತ್ರಾಕ್ಷತೆ ನೀಡಿ ಆಶೀರ್ವಾದ ಪಡೆದ ಬಿಜೆಪಿ ಮುಖಂಡರು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 02 : ನಗರದ ಶ್ರೀ ಯಾದವನಂದ ಮಠಕ್ಕೆ ನಿನ್ನೆ ಸಂಜೆ ಭೇಟಿ ನೀಡಿದ ಮಂತ್ರಾಕ್ಷತೆ ಕಾರ್ಯಕ್ರಮದ ಪದಾಧಿಕಾರಿಗಳು  ಅಯೋಧ್ಯೆಯಿಂದ ಪ್ರಭು ಶ್ರೀ ರಾಮನಿಗೆ ಪೂಜಿಸಿದ ಪವಿತ್ರ ಮಂತ್ರಾಕ್ಷತೆ ಹಾಗೂ ಶ್ರೀರಾಮ ಮಂದಿರದ ಉದ್ಘಾಟನೆಯ ಕರಪ್ರತಿ ಪತ್ರಿಕೆಯನ್ನು ಯಾದವ ಸಂಸ್ಥಾನ ಮಠದ  ಶ್ರೀ ಯಾದವನಂದ ಮಹಾಸ್ವಾಮಿಗಳಿಗೆ ನೀಡಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರು ಮಂತ್ರಾಕ್ಷತೆ ಕಾರ್ಯಕ್ರಮದ ಜಿಲ್ಲಾ ತಂಡದ ಪ್ರಮುಖರಾದ ಜಿ.ಎಸ್ ಅನಿತ್ ಕುಮಾರ್, ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, , ಬಿಜೆಪಿ ಯುವ ಮುಖಂಡ ರಘು ಚಂದನ್  , ಜಿಲ್ಲಾ ಪ್ರಚಾರಕರಾದ ಶ್ರೀನಾಥ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರುದ್ರೇಶ್, ಎಬಿವಿಪಿ ಜಿಲ್ಲಾ  ಸಂಚಾಲಕರಾದ ಡಾ. ಲೇಪಾಕ್ಷ, ಜಿಲ್ಲಾ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮುಖ್ಯಸ್ಥರಾದ ನಾಗೇಶ್ ಜಿ, ಜಿಲ್ಲಾ ತಂಡದ ಪ್ರಮುಖರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment