Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಚಾರ್ಯರಿಂದಾನೇ ಬಿಜೆಪಿ ಸೋತಿದ್ದು : ಹಿಂಗ್ಯಾಕ್ ಅಂದ್ರು ವೀರೇಶ್ ಹನಗವಾಡಿ..?

Facebook
Twitter
Telegram
WhatsApp

ದಾವಣಗೆರೆ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66 ಸ್ಥಾನಗಳನ್ನಷ್ಟೇ ಪಡೆದುಕೊಂಡಿದೆ. ಅದಕ್ಕೆ ರೇಣುಕಾಚಾರ್ಯ ಅವರೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ವೀರೇಶ್ ಹನಗವಾಡಿ ಆಕ್ರೋಶ ಹೊರಹಾಕಿದ್ದಾರೆ.

ರೇಣುಕಾಚಾರ್ಯ ಮಗಳಿಗೆ ಶಿಕ್ಷಣ ಕೊಡಿಸಲು ಎಸ್ಸಿ ಸಮುದಾಯದ ಪ್ರಮಾಣ ಪತ್ರವನ್ನು ಮಾಡಿಸಿದ್ದರು. ಆ ಪ್ರಕರಣ ಬೆಳಕಿಗೆ ಬಂದು ಹಂಗೆ ತಣ್ಣಗೆ ಆಗಿ ಹೋಯ್ತು. ಈ ಬಗ್ಗೆಯೇ ಹರಿಹಾಯ್ದಿರುವ ವೀರೇಶ್ ಹನಗವಾಡಿ, ರೇಣುಕಾಚಾರ್ಯ ಅವರು ವೀರಶೈವ ಜಂಗಮ ಜಾತಿಯಲ್ಲಿ ಹುಟ್ಟಿದವರು. ವೀರಶೈವರಲ್ಲಿ ಇವರಿಗೆ ಗುರುವಿನ ಸ್ಥಾನಮಾನವಿದೆ. ಇಂತವರು ಪರಿಶಿಷ್ಟ ಜಾತಿಗೆ ಸೇರಿದ ಬೇಡ-ಜಂಗಮರ ಜಾತಿಪತ್ರವನ್ನು ಪಡೆದರು. ಇದರಿಂದಾನೇ ಬಿಜೆಪಿಗೆ ಹೆಚ್ಚಿನ ಸೀಟು ಬರುವುದಕ್ಕೆ ವಿಫಲವಾಯಿತು. ರೇಣುಕಾಚಾರ್ಯ ಯಾವಾಗ ಪರಿಶಿಷ್ಟ ಜಾತಿಗೆ ಸೇರಿದ ಜಂಗಮ ಜಾತಿ ಪ್ರಮಾಣ ಪತ್ರವನ್ನು ಪಡೆದರೋ ಇಡೀ ರಾಜ್ಯದಲ್ಲಿನ ದಲಿತರು, ಬಿಜೆಪಿಯ ವಿರೋಧಿಗಳಾದರು.

 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 66 ಸೀಟು ಬರುವುದಕ್ಕೆ ಇದೇ ಪ್ರಮುಖವಾದ ಕಾರಣ. ಇದರ ಜೊತೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲೂ ತೊಡಗಿ ಬಿಜೆಪಿ ಅಭ್ಯರ್ಥಿಯ ಸೋಲಿಗೇನೆ ಕಾರಣವಾದವರು. ಅಮಿತ್ ಶಾ ಅವರು ರೇಣುಕಾಚಾರ್ಯ ಅವರಿಗೆ ಕೈ ಮುಗಿದು ಕ್ಷಮೆ ಕೇಳಿದ್ದರು. ಈ ಹಿಂದೆ ಅಮಿತ್ ಶಾ ಜೊತೆಗೆ ಸಭೆ ಮಾಡಿದ್ದಾಗ ರೇಣುಕಾಚಾರ್ಯ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ಧ ದೂರು ನೀಡಿದ್ದರು. ಈ ವೇಳೆ ಸ್ವತಃ ಅಮಿತ್ ಶಾ ಅವರು ಕ್ಷಮೆ ಕೇಳಿದ್ದರು ಸಹ ಚುನಾವಣೆಯಲ್ಲಿ ಚೆನ್ನಾಗಿ ಕೆಲಸ ಮಾಡಬೇಕಿತ್ತು.‌ಆದರೆ ಮಾಡಲೇ ಇಲ್ಲ. ಈ ವಿಚಾರವನ್ನು ವರಿಷ್ಠರಿಗೆ ತಿಳಿಸಿದ್ದೇವೆ ಎಂದು ರೇಣುಕಾಚಾರ್ಯ ವಿರುದ್ಧ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Hypertension : ಇವುಗಳನ್ನು ತಿಂದರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ…!

ಸುದ್ದಿಒನ್ : ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ, ಪ್ರತಿದಿನ ರಕ್ತದೊತ್ತಡದ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಸಮಸ್ಯೆ ಏನೆಂದರೆ, ಅಧಿಕ ರಕ್ತದೊತ್ತಡವು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಇದು ದೇಹದ ಯಾವುದೇ ಭಾಗದ ಮೇಲೆ ಯಾವಾಗ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ, ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ಉದ್ಯೋಗ ಪ್ರಾಪ್ತಿ, ಬುಧವಾರ ರಾಶಿ ಭವಿಷ್ಯ -ಜುಲೈ-3,2024 ಸೂರ್ಯೋದಯ: 05:50, ಸೂರ್ಯಾಸ್ತ

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

error: Content is protected !!