Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೊಗಳಿಕೆ

---Advertisement---

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡನೆ ಮಾಡಿದ್ದಾರೆ. 2024-25 ಸಾಲಿನ ಬಜೆಟ್ ಮಂಡಿಸಿದ್ದು, ಇದನ್ನು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೊಗಳಿಕೆಯ ಮಾತನ್ನು ಆಡಿದ್ದಾರೆ.

 

ಬಜೆಟ್ ಬಗ್ಗೆ ಮಾತನಾಡಿದ ಎಸ್ ಟಿ ಸೋಮಶೇಖರ್, ಬಜೆಟ್ ನಲ್ಲಿ ಬೆಂಗಳೂರಿಗೆ ಸೀಮಿತವಾಗಿ ಮಾತನಾಡುವುದಾದರೆ ನಾವೂ ಏನೇನು ಬೇಡಿಕೆ ಇಟ್ಟಿದ್ದೆವೋ ಅದೆಲ್ಲವನ್ನು ಕೂಡ ಜಾರಿಗೆ ತಂದಿದ್ದಾರೆ. ಕಸದ ಘಟಕಗಳನ್ನು 100 ಪರ್ಸೆಂಟ್ ಶಿಫ್ಟ್ ಮಾಡಲೇಬೇಕು ಅನ್ನೋದು ನಮ್ಮ ಮನವಿ ಆಗಿತ್ತು. ಅದರಂತೆ ಕಸದ ಘಟಕಗಳನ್ನು ಶಿಫ್ಟ್ ಮಾಡಿದ್ದಾರೆ. ಮೆಟ್ರೋ ಕಾಮಗಾರಿಗಳನ್ನು ಮಾಡಯತ್ತಾ ಇದ್ದಾರೆಮ ಅದನ್ನು ನಮ್ಮ ಕ್ಷೇತ್ರಗಳಿಗೂ ವಿಸ್ತರಣೆ ಮಾಡಲಿದ್ದಾರೆ. ನಮ್ಮ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಮಾಡಲು ಕೇಳಿದ್ದೆವು. ಅದರಂತೆ 1700 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ಬರೀ ಯಶವಂತಪುರ ಕ್ಷೇತ್ರ ಮಾತ್ರವಲ್ಲ ಬೆಂಗಳೂರಿನ 28 ಕ್ಷೇತ್ರಕ್ಕೂ ಇದು ಅನುಕೂಲವಾಗಲಿದೆ ಎಂದಿದ್ದಾರೆ.

ಬಜೆಟ್ ವಿಚಾರಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅವರೇ ನೀಡಿರುವ ಹೇಳಿಕೆಯನ್ನು ಪುನರುಚ್ಛಾರ ಮಾಡಿ, ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ನಾಯಕರು ಬಜೆಟ್ ಓದದೇ ಸಭಾತ್ಯಾಗ ಮಾಡಿದ್ದು ಸರಿಯಲ್ಲ. ಸಮಸ್ಯೆ ಇದ್ದರೆ ಚರ್ಚೆ ಮಾಡಲಿ. ಇವರು ಕನ್ನಡಿಗರ ಸೇವೆಗೆ ಇರೋದಾ ಅಥವಾ ಮೋದಿ ಸೇವೆಗೆ ಇರೋದಾ..? ಸೋಮಶೇಖರ್ ಅವರೇ ಬಜೆಟ್ ಗೆ ಜೈ ಎಂದಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹಾಗೂಸಚುವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿ ಉತ್ತರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...