Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವಿನ ಮನೆಯಲ್ಲಿ ರಾಹುಲ್ ಗಾಂಧಿ ನಗುತ್ತಿದ್ದಾರೆ : ಕಿಡಿಕಾರಿದ ಬಿಜೆಪಿ

Facebook
Twitter
Telegram
WhatsApp

ನವದೆಹಲಿ : ಸಮಾಜವಾದಿ ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರ ಕುಟುಂಬಕ್ಕೆ ಸಾಂತ್ವನ ಹೇಳುವಾಗ ನಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ಜನತಾ ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

2018 ರಲ್ಲಿ ಕರ್ನಾಟಕದ ಮಾಜಿ ಸಿಎಂ ಎನ್ ಧರಂ ಸಿಂಗ್ ಅವರ ಸಂತಾಪ ಸೂಚಕ ಸಭೆಯಲ್ಲಿ ಕೂಡಾ ರಾಹುಲ್ ನಗುತ್ತಿದ್ದರು. ಆ ಸಂದರ್ಭದಲ್ಲಿ ‌ತೆಗೆದ ಫೋಟೋಗಳನ್ನು ಸಹಾ ಪೂನಾವಾಲಾ ಅವರು ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂತಾಪ ಸೂಚಿಸುವ ಸಂದರ್ಭದಲ್ಲಿ
ನಗುತ್ತಿರುವ ಚಿತ್ರಗಳನ್ನು ಹಂಚಿಕೊಂಡು, ಬಿಜೆಪಿ ರಾಷ್ಟ್ರೀಯ ವಕ್ತಾರರು ಟ್ವೀಟ್ ಮಾಡಿದ್ದಾರೆ, “ಶರದ್ ಯಾದವ್ ಅವರ ಕುಟುಂಬ ಕಣ್ಣೀರು ಸುರಿಸುತ್ತಿರುವಾಗ ರಾಹುಲ್ ಗಾಂಧಿ ನಗುತ್ತಿದ್ದಾರೆ.

2018 ರಲ್ಲಿಯೂ ಇದೇ ರೀತಿ ಧರಂ ಸಿಂಗ್ ಅವರ ಸಂತಾಪ ಸೂಚಕ ಸಭೆಯಲ್ಲಿ ರಾಹುಲ್ ನಗುತ್ತಿದ್ದರು; ಪುಲ್ವಾಮಾ ಶ್ರದ್ಧಾಂಜಲಿ ಸಮಯದಲ್ಲಿ ಫೋನ್‌ನಲ್ಲಿ ಬ್ಯುಸಿಯಾಗಿದ್ದರು ಎಂದು ಬಿಜೆಪಿ ಕಿಡಿ ಕಾರಿದೆ.

ನಿನ್ನೆ(ಗುರುವಾರ) ರಾತ್ರಿ ನಿಧನರಾದ ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರಿಗೆ ದೆಹಲಿಯ ತಮ್ಮ ನಿವಾಸದಲ್ಲಿ ರಾಹುಲ್ ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದರು. “ಶರದ್ ಯಾದವ್ ಜಿ ಅವರಿಂದ ನಾನು ರಾಜಕೀಯದ ಬಗ್ಗೆ ಸಾಕಷ್ಟು ಕಲಿತಿದ್ದೇನೆ. ಇಂದು ಅವರ ನಿಧನ ನನಗೆ ದುಃಖ ತಂದಿದೆ. ಅವರು ನನ್ನ ‘ತಂದೆಯ’ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಹಿರಿಯ ರಾಜಕಾರಣಿ ಮತ್ತು ಮಾಜಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ಗುರುವಾರ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ ವಯಸ್ಸು 75. ಅವರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!