Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ..!

---Advertisement---

 

ಚಾಮರಾಜನಗರ: ಸಂಸದ ಶ್ರೀನಿವಾಸ್ ಪ್ರಸಾದ್ ಇದೀಗ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಲ್ಲಂತು ರಾಜೀನಾಮೆ ಪರ್ವ ಜೋರಾಗಿಯೇ ಶುರುವಾಗಿದೆ. ಟಿಕೆಟ್ ಸಿಗದ ಕಾರಣ ಹಲವರು ರಾಜೀನಾಮೆ ಘೋಷಿಸಿದ್ದಾರೆ. ಆದರೆ ಶ್ರೀನಿವಾಸ್ ಪ್ರಸಾದ್ ಇದೆ ನನ್ನ ಕೊನೆಯ ಚುನಾವಣಾ ಪ್ರಚಾರ ಅಂತ ತಿಳಿಸಿದ್ದಾರೆ.

ಬಿಜೆಪಿಯಿಂದ ಚಾಮರಾಜನಗರದ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್, ಗುಂಡ್ಲುಪೇಡೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾದ ನಡೆಸುತ್ತಿದ್ದ ಸಂದರ್ಭದಲ್ಲಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಅವಧಿ ಮುಗಿದ ಬಳಿಕ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದಾರೆ.

“ಮುಂದಿನ ವರ್ಷ ನನ್ನ ಲೋಕಸಭಾ ಅವಧಿ ಮುಕ್ತಾಯವಾಗಲಿದೆ. ಆ ಬಳಿಕ ನಾನು ಯಾವುದೇ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪ್ರಾಮಾಣಿಕವಾಗಿ ಯಾವುದೇ ಆರೋಪಗಳಿಲ್ಲದೆ ಕೆಲಸ ಮಾಡಿದ್ದೇನೆ. ಬರೋಬ್ಬರಿ 14 ಬಾರಿ ಚುನಾವಣೆ ಎದುರಿಸಿದ್ದೇನೆ. ಇದು ನನ್ನ ರಾಜಕೀಯದ ಕೊನೆ ಚುನಾವಣೆ ಪ್ರಚಾರ. 2014ರ ವಿಧಾನಸಭಾ ಚುನಾವಣೆಗೆ ನನ್ನ ಅವಧಿ ಮುಕ್ತಾಯವಾಗಲಿದೆ. ಬಳಿಕ ನಿವೃತ್ತಿ ಘೋಷಿಸುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...