Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿಧಾನಪರಿಷತ್ ಚುನಾವಣೆಯಲ್ಲೂ ಸುಮಲತಾಗೆ ಕೈಕೊಟ್ಟ ಬಿಜೆಪಿ : ಟಿಕೆಟ್ ಮಿಸ್ಸಿಂಗ್..!

---Advertisement---

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿಯೇ ಸುಮಲತಾಗೆ ಮಂಡ್ಯ ಟಿಕೆಟ್ ಮಿಸ್ ಆಗಿತ್ತು. ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಆದರೆ ಸುಮಲತಾಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ಆದ್ರೂ ಸಿಗಬಹುದು ಎಂಬ ನಿರೀಕ್ಷೆ ಇತ್ತು‌ ಈಗ ಅದು ಸುಳ್ಳಾಗಿದೆ. ಜೂನ್ 13 ಕ್ಕೆ ವಿಧಾನಪರಿಷತ್ ಚುನಾವಣೆ ನಡೆಯಲಿದೆ.

ಇದೀಗ ಬಿಜೆಪಿ ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದು, ಮಾಜಿ ಸಚಿವ ಸಿ.ಟಿ. ರವಿ, ಎಂ.ಜಿ.ಮುಳೆ, ಎನ್.ರವಿಕುಮಾರ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿರುವ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಮೂರು ಸ್ಥಾನಗಳನ್ನು ಗೆಲ್ಲಬಹುದಾಗಿದೆ. ಇನ್ನು ಸಿ.ಟಿ. ರವಿ ಅವರು ಇದೇ ಮೊದಲ ಬಾರಿಗೆ ವಿಧಾನಪರಿಷತ್ ಗೆ ಪ್ರವೇಶ ಮಾಡಲಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಗೆದ್ದರೆ ವಿಧಾನ ಪರಿಷತ್ ನ ವಿಪಕ್ಷ ನಾಯಕನ ಸ್ಥಾನ ತೆರವುಗೊಳ್ಳಲಿದೆ. ಮುಂದೆ ಸಿ.ಟಿ. ರವಿ ವಿಧಾನಪರಿಷತ್ ನ ವಿಪಕ್ಷ ನಾಯಕನನ್ನು ಮಾಡುವ ಸಾಧ್ಯತೆ ಇದೆ.

ಇನ್ನು ಒಬಿಸಿ ವರ್ಗದಲ್ಲಿ ಎನ್ ರವಿ ಕುಮಾರ್ ಅವರಿಗೆ ಎರಡನೇ ಬಾರಿಗೆ ಟಿಕೆಟ್ ನೀಡಲಾಗಿದ್ದು, ಈಗಾಗಲೇ ವಿಧಾನಪರಿಷತ್ ನ ವಿಪಕ್ಷ ಮುಖ್ಯ ಸಚೇತಕರಾಗಿದ್ದಾರೆ. ಮೂರನೇ ಟಿಕೆಟ್ ಅನ್ನು ಮರಾಠ ಸಮುದಾಯದ ಮುಳೆ ಅವರಿಗೆ ನೀಡಲಾಗಿದೆ‌. ಮುಳೆ ಅವರು ಬಸವ ಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಹಾಗೂ ಮರಾಠಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಆಗಿದ್ದಾರೆ. ಮುಳೆ ಅವರು ಈ ಮೊದಲು ಜೆಡಿಎಸ್ ನಲ್ಲಿದ್ದರು, ಕಳೆದ ಉಪ ಚುಣಾವಣೆಯಲ್ಲಿ ಬಿಜೆಪಿ ಸೇರಿದ್ದರು. ಮೂರು ಟಿಕೆಟ್ ಅನ್ನು ಹಂಚಲಾಗಿದ್ದು, ಸುಮಲತಾಗೆ ಪರಿಷತ್ ಟಿಕೆಟ್ ಕೂಡ ಮಿಸ್ ಆಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment