ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ಮೂಡಾ ಹಗರಣವನ್ನು ವಿರೋಧಿಸಿ, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ, ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ. ಆದರೆ ಈ ಪಾದಯಾತ್ರೆಗೆ ಆರಂಭದಲ್ಲಿಯೇ ವಿಘ್ನ ಎದುರಾಗಿತ್ತು. ಜೆಡಿಎಸ್ ನಾಯಕರು ಈ ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂಬುದನ್ನು ಹೇಳಿದ್ದರು. ಇದು ಬಿಜೆಪಿ ನಾಯಕರಿಗೆ ಆಶ್ಚರ್ಯವನ್ನುಂಟು ಮಾಡಿತ್ತು.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿತ್ತು. ಆದರೆ ಈಗ ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದು ಹೇಳುತ್ತಿರುವುದು ಮೈತ್ರಿ ವಲಯದಲ್ಲಿ ಶಾಕಿಂಗ್ ಎನಿಸಿದೆ. ಚುನಾವಣೆ ಆದ ಮೇಲೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮುಂದುವರೆಸಿದೆ. ಕುಮಾರಸ್ವಾಮಿ ಕೇಂದ್ರ ಸಚುವರಾಗಿ ಮೋದಿ ಸಂಪುಟ ಸೇರಿದ್ದಾರೆ. ಹೀಗಿರುವಾಗ ಬಿಜೆಪಿ ನಡೆಯುವ ಹಾದಿಯಲ್ಲಿ ಜೊತೆಯಾಗಿಯೇ ಹೆಜ್ಜೆ ಹಾಕುತ್ತಾರೆ ಎಂದೇ ಹೇಳಲಾಗುತ್ತಿತ್ತು. ಈಗ ದಿಢೀರನೇ ಪಾದಯಾತ್ರೆಯಿಂದ ಹಿಂದೆ ಸರಿದಿದೆ. ರಾಜ್ಯದಲ್ಲಿ ಪ್ರವಾಹ ಆಗುತ್ತಿದೆ. ಜನ ಸಂಕಷ್ಟಕ್ಕೆ ಸಿಲುಕಿರುವಾಗ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದರು.
ಆದರೆ ಜೆಡಿಎಸ್ ಬೆಂಬಲವಿಲ್ಲದೆ ಪಾದಯಾತ್ರೆಯನ್ನು ಸ್ಥಗಿತಗೊಳೊಸಿದರೆ ಬಿಜೆಪಿಗೆ ಮುಖಭಂಗವಾಗಲಿದೆ. ಸಿದ್ದರಾಮಯ್ಯ ಅವರಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿಸುವ ತನಕ ಹೋರಾಟ ಮಾಡುತ್ತಿದ್ದಾರೆ. ಹೀಗಿರುವಾಗ ಪಾದಯಾತ್ರೆಯಿಂದ ಹಿಂದೆ ಸರಿಯುವುದಕ್ಕೆ ಹೇಗೆ ಸಾಧ್ಯ. ಈ ಎಲ್ಲಾ ವಿಚಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ. ಹೈಕಮಾಂಡ್ ನಿಂದ ಪಾದಯಾತ್ರೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ. ಈ ರೀತಿ ನಾವೂ ಸುಮ್ಮನೆ ಇದ್ದರೆ ಎಲ್ಲದಕ್ಕೂ ಹೆದರಿಸುತ್ತಲೇ ಇರುತ್ತಾರೆ. ಸಮಾರೋಪ ಸಮಾರಂಭಕ್ಕೆ ನಾನು ಜೊತೆಗೆ ಇರುತ್ತೇನೆ ಎಂದು ಹುಮ್ಮಸ್ಸು ತುಂಬಿದ್ದಾರೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್