ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಆಕಾಂಕ್ಷಿಯಾಗಿರುವ ಬಾಬೂರಾವ್ ಚಿಂಚನಸೂರು ನನಗೆಲ್ಲಿ 75 ವರ್ಷವಾಗಿದೆ. ಮುಂದಿನ ಬಾರಿ ಕುಸ್ತಿ ಹೊಡೆಯುವೆ ಎಂದು ಹೇಳಿದ್ದಾರೆ.
ಸಿ ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರು ಅವರಿಗೆ ಟಿಕೆಟ್ ನೀಡುವುದು ಪಕ್ಕಾ ಆಗಿದೆ. ಈ ವಿಚಾರವಾಗಿ ಮಾಧ್ಯಮದವರ ಜೊತೆ ಮಾತನಾಡಿದ ಚಿಂಚನಸೂರು, ಹೈದರಬಾದ್ ಕರ್ನಾಟಕ ಭಾಗದಲ್ಲಿ ಐದು ಬಾರಿ ಗೆಲುವು ಕಂಡಿದ್ದೇನೆ. 75 ಮೀರಿದವರಿಗೂ ಬಿಜೆಪಿಯಲ್ಲಿ ಟಿಕೆಟ್ ನೀಡಲಾಗಿದೆ. ನನಗೆಲ್ಲಿ 75 ವಯಸ್ಸಾಗಿದೆ ಎಂದಿದ್ದಾರೆ.
ಆ ಭಾಗದಲ್ಲಿ ನಮ್ಮ ಕೋಲಿ ಸಮಾಜದ ಶೇ. 75 ರಷ್ಟು ವೋಟ್ ಇದೆ. ನನ್ನನ್ನು ಗುರುತಿಸಿ ಪಕ್ಷ ಪರಿಷತ್ ಟಿಕೆಟ್ ನೀಡಿದೆ. ಹೈದ್ರಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ. ಮುಂದಿನ ಬಾರಿ ನಾನು ಗುರುಮಿಟ್ಕಲ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನ. ನಾನಿನ್ನು ಮದುವೆ ಗಂಡು ಇದ್ದಂಗೆ ಇದ್ದೀನಿ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…