Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆ ಚುನಾವಣೆ: ಬಿಜೆಪಿಯ ಮೂವರು, ಕಾಂಗ್ರೆಸ್ ನಿಂದ ಒಬ್ಬರು ಗೆಲುವು : ಯಾರ್ಯಾರಿಗೆ ಎಷ್ಟು ಮತ ಎಂಬ ಮಾಹಿತಿ ಇಲ್ಲಿದೆ…!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯಸಭಾ ಚುನಾವಣೆ ವಿಚಾರದಲ್ಲಿ ಇಬ್ಬರ ಜಗಳ ಮೂರನೆಯವರಿಗೆ ಲಾಭ ಎಂಬಂತೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿದೆ. ನಮಗೆ ಬೆಂಬಲ ಕೊಡಿ ಅಂತ ಜೆಡಿಎಸ್ ಕುಪೇಂದ್ರ ರೆಡ್ಡಿ ನಿಲ್ಲಿಸಿದ್ರೆ, ನಮ್ಮ ಎರಡು ಅಭ್ಯರ್ಥಿಗಳು ಗೆಲ್ಲುತ್ತಾರೆಂದು ಕಾಂಗ್ರೆಸ್ ಮನ್ಸುರ್ ಖಾನ್ ಅವರನ್ನು ನಿಲ್ಲಿಸಿತ್ತು. ಕೊನೆವರೆಗೂ ಜೆಡಿಎಸ್ ಕಾಂಗ್ರೆಸ್ ಮೈತ್ರಿಗೆ ಹರಸಾಹಸವನ್ನೆ ಪಟ್ಟಿತ್ತು. ಕಡೆಗೆ ಬಿಜೆಪಿ ಪಕ್ಷದ ಇಬ್ಬರು ಗೆಲ್ಲುವ ನಿರೀಕ್ಷೆ ಇತ್ತು, ಮೂರನೇ ಅಭ್ಯರ್ಥಿಗೆ ಮತದ ಅಗತ್ಯತೆ ಇತ್ತು. ಆದರೆ ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನ ಜೈರಾಮ್ ರಮೇಶ್ ಗೆಲುವಿನ ನಗೆ ಬೀರಿದ್ದು, ಜೆಡಿಎಸ್ ಕುಪೇಂದ್ರ ರೆಡ್ಡಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯಿಂದ ಕೇಂದ್ರ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತರಾಮನ್ ಕರ್ನಾಟಕ ರಾಜ್ಯಸಭೆಗೆ ಬಾರಿಯೂ ಆಯ್ಕೆಯಾಗಿದ್ದಾರೆ. ಇನ್ನು ನಟ ಜಗ್ಗೇಶ್ ಮೊದಲ ಬಾರಿಗೆ ಗೆಲುವು ಕಂಡಿದ್ದಾರೆ. ಇನ್ನು ಬಿಜೆಪಿಯ ಮೂರನೇ ಅಭ್ಗರ್ಥಿ ಲೆಹರ್ ಸಿಂಗ್ ಮೊದಲ ಮತ್ತು ಎರಡನೇ ಪ್ರಾಶಸ್ತ್ಯದ ಮತಗಳಿಂದ ಗೆಲುವು ಕಂಡಿದ್ದಾರೆ. ಪರೋಕ್ಷವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಗುದ್ದಾಟ ಲೆಹರ್ ಸಿಂಗ್ ಗೆಲವಿಗೆ ಕಾರಣವಾಗಿದೆ.

ಇನ್ನು ಬಿಜೆಪಿಯ ನಿರ್ಮಲಾ ಸೀತರಾಮನ್ ಪ್ರಥಮ ಪ್ರಾಶಸ್ತ್ಯದ ಮತ ಗಳಿಸಿದ್ದು, 46 ಮತ ಪಡೆದಿದ್ದಾರೆ. ನಟ ಜಗ್ಗೇಶ್ ಪ್ರಥಮ ಪ್ರಾಶಸ್ತ್ಯದ ಮತಗಳನ್ನೇ ಪಡೆದಿದ್ದು, 44 ಮತ ಗಳಿಸಿದ್ದಾರೆ. ಲೆಹರ್ ಸಿಂಗ್ ಪಡೆದ ಮತ 33 ಆಗಿದೆ. ಇನ್ನು ಕಾಂಗ್ರೆಸ್ ನ ಜೈರಾಮ್ ರಮೇಶ್ ಮೊದಲ ಪ್ರಾಶಸ್ತ್ಯದ 44 ಮತ ಪಡೆದಿದ್ದಾರೆ. ಮನ್ಸೂರ್ ಅಲಿಖಾನ್ ಅವರು ಸೋಲು ಅನುಭವಿಸಿದ್ದು, 25 ಮತ ಪಡೆದಿದ್ದಾರೆ. ಜೆಡಿಎಸ್ ನಿಂದ ಸೋಲು ಅನುಭವಿಸಿದ್ದು, ಕುಪೇಂದ್ರ ರೆಡ್ಡಿ, 30 ಮತ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

error: Content is protected !!