Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈದ್ ಮಿಲಾದ್ ಗಲಾಟೆಯಾದ ಸ್ಥಳಕ್ಕೆ ಬಿಜೆಪಿ ಸತ್ಯಶೋಧನ ತಂಡ ಭೇಟಿ..!

Facebook
Twitter
Telegram
WhatsApp

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ಗಲಭೆ ನಡೆದಿದೆ. ಸದ್ಯಕ್ಕೆ ಶಿವಮೊಗ್ಗದಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದು ಪರಿಸ್ಥಿತಿ ಹತೋಟಿಯಲ್ಲಿದೆ. ಇಂದು ಗಲಾಟೆ ನಡೆದ ಸ್ಥಳಕ್ಕೆ ಬಿನೆಪಿಯ ಸತ್ಯ ಶೋಧನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಘಟನೆಯ ಸಂಪೂರ್ಣ ಮಾಹಿತಿ ಪಡೆಯಲಿದೆ.

 

ಸತ್ಯಶೋಧನಾ ತಂಡದಲ್ಲಿ ನಳೀನ್ ಕುಮಾರ್ ಕಟೀಲ್, ಈಶ್ಚರಪ್ಪ, ಅಶ್ವತ್ಥ್ ನಾರಾಯಣ್, ಆರಗ ಜ್ಞಾನೇಂದ್ರ, ಬಿವೈ ರಾಘವೇಂದ್ರ, ರವಿಕುಮಾರ್, ಶಾಸಕ ಚನ್ನಬಸಪ್ಪ ಸೇರಿದಂತೆ ಹಲವರು ಈ ತಂಡದಲ್ಲಿ ಇರಲಿದ್ದಾರೆ. ನೇರವಾಗಿ ಘಟನೆ ನಡೆದ ಸ್ಥಳಕ್ಕೆ ಹೋಗಿ, ಅಲ್ಲಿ ಪರಿಶೀಲನೆ ನಡೆಸಲಿದ್ದಾರೆ.

ಗಲಭೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೌಹಾರಿತ್ತು. ಅದರ ಮುಂದುವರೆದ ಭಾಗವೇ ಇಂದು ಸತ್ಯಶೋಧನೆ ಮಾಡಲು ಹೊರಟಿದೆ. ಅಲ್ಲಿ ಏನೆಲ್ಲಾ ಆಯ್ತು ಎಂಬ ಮಾಹಿತಿ ಕಲೆ ಹಾಕಲಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರದಂದು ಈದ್ ಮಿಲಾದ್ ಮೆರವಣಿಗೆ ನಡೆದಿತ್ತು. ಈ ವೇಳೆ ಬೀದಿ ಬೀದಿಯಲ್ಲಿ ತಲ್ವಾರ್ ಹಿಡಿದು ಪ್ರದರ್ಶನ ಮಾಡಲಾಗಿದೆ ಎನ್ನಲಾಗಿದೆ. ಈ ವೇಳೆ ಪಿಂಡರ ಗುಂಪು ಜನರ ಮೇಲೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು. ಜಿಲ್ಲೆಯಲ್ಲಿ ಈಗಲೂ 144 ಸೆಕ್ಷನ್ ಜಾರಿಯಲ್ಲಿದೆ‌. ಪೊಲೀಸರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!