Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಕುಟುಂಬ ರಾಜಕಾರಣದ ಬಗ್ಗೆ ಇನ್ಮುಂದೆ ಬಿಜೆಪಿ ಮಾತನಾಡಬಾರದು : ಆಯನೂರು ಮಂಜುನಾಥ್

---Advertisement---

ವಿಧಾನಸಭಾ ಚುನಾವಣೆ ಕಳೆದು ಆರು ತಿಂಗಳ ಬಳಿಕ ಕಡೆಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇದಕ್ಕೆ ಬಿಜೆಪಿಯಲ್ಲಿಯೇ ಹಲವರು ಅಸಮಾಧಾನ ಕೂಡ ವ್ಯಕ್ತಪಡಿಸಿದ್ದಾರೆ. ಇದರ‌ ನಡುವೆ ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿದ್ದು, ಬಿಜೆಪಿ ಇನ್ಮುಂದೆ ಆದರೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದನ್ನು ಬಿಡಬೇಕು. ಬಿವೈ ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು ಎಂದಿದ್ದಾರೆ.

 

ಬಿಎಸ್ವೈ ಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹಳ ಸಂತಸದ ವಿಚಾರ. ಬಿಜೆಪಿಯಲ್ಲಿ ಇದೇ ಮೊದಲ ಬಾರಿಗೆ ಅತಿ ಸಣ್ಣ ವಯಸ್ಸಿನ ರಾಜ್ಯಾಧ್ಯಕ್ಷರ ನೇಮಕವಾಗಿರುವುದು. ಯಶಸ್ವಿಯಾಗಿ ಬಹಳ ಎಚ್ಚರದಿಂದ ಕೆಲಸ ಮಾಡಲಿ. ವಿಜಯೇಂದ್ರ ಇಡುವಂತ ಪ್ರತಿಯೊಂದು ಹೆಜ್ಜೆ ಯಡಿಯೂರಪ್ಪ ಅವರ ಮೇಲೆ ಪ್ರಭಾವ ಬೀರುತ್ತದೆ. ವಿಜಯೇಂದ್ರ ಅವರ ಹಿಂದೆ ಯಡಿಯೂರಪ್ಪ ಅವರ ಪ್ರಭಾವವಿದೆ. ಹೀಗಾಗಿ ಅವರ ಸಫಲತೆ ಹಾಗೂ ವಿಫಲತೆ ಎರಡೂ ಯಡಿಯೂರಪ್ಪ ಮೇಲೆ ಪ್ರಭಾವ ಬೀರುತ್ತದೆ.

 

ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತದೆ ಎಂದು ನಾನು ಹೇಳುವುದಿಲ್ಲ. ಯಡಿಯೂರಪ್ಪ ಅವರ ಸಂಪೂರ್ಣ ಶಕ್ತಿ ಬಳಸಿಕೊಳ್ಳಲು ಈ ರೀತಿ ಮಾಡಿದ್ದಾರೆ. ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ತೊಂದರೆಗಳಿಲ್ಲ. ಈಗಾಗಲೇ ಕಾಂಗ್ರೆಸ್ ತನ್ನ ಸಾಮರ್ಥ್ಯವನ್ನು ಪ್ರದರ್ಶನ ಮಾಡಿದೆ. ಬಿಜೆಪಿ ಈ ಆಯ್ಕೆಯಿಂದ ಅವರ ಆಂತರಿಕ ಕಲಹ, ಭ್ರಷ್ಟಾಚಾರ ಯಾವುದೂ ಕೂಡ ಮಾಯವಾಗುವುದಿಲ್ಲ. ಅವರ ಕೆಲಸಕ್ಕಾಗಿ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಂಡಿದ್ದಾರೆಯೇ ಹೊರತು ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...