Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಕುಟುಂಬ ರಾಜಕಾರಣದ ಬಗ್ಗೆ ಇನ್ಮುಂದೆ ಬಿಜೆಪಿ ಮಾತನಾಡಬಾರದು : ಆಯನೂರು ಮಂಜುನಾಥ್

Facebook
Twitter
Telegram
WhatsApp

ವಿಧಾನಸಭಾ ಚುನಾವಣೆ ಕಳೆದು ಆರು ತಿಂಗಳ ಬಳಿಕ ಕಡೆಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇದಕ್ಕೆ ಬಿಜೆಪಿಯಲ್ಲಿಯೇ ಹಲವರು ಅಸಮಾಧಾನ ಕೂಡ ವ್ಯಕ್ತಪಡಿಸಿದ್ದಾರೆ. ಇದರ‌ ನಡುವೆ ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿದ್ದು, ಬಿಜೆಪಿ ಇನ್ಮುಂದೆ ಆದರೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದನ್ನು ಬಿಡಬೇಕು. ಬಿವೈ ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು ಎಂದಿದ್ದಾರೆ.

 

ಬಿಎಸ್ವೈ ಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹಳ ಸಂತಸದ ವಿಚಾರ. ಬಿಜೆಪಿಯಲ್ಲಿ ಇದೇ ಮೊದಲ ಬಾರಿಗೆ ಅತಿ ಸಣ್ಣ ವಯಸ್ಸಿನ ರಾಜ್ಯಾಧ್ಯಕ್ಷರ ನೇಮಕವಾಗಿರುವುದು. ಯಶಸ್ವಿಯಾಗಿ ಬಹಳ ಎಚ್ಚರದಿಂದ ಕೆಲಸ ಮಾಡಲಿ. ವಿಜಯೇಂದ್ರ ಇಡುವಂತ ಪ್ರತಿಯೊಂದು ಹೆಜ್ಜೆ ಯಡಿಯೂರಪ್ಪ ಅವರ ಮೇಲೆ ಪ್ರಭಾವ ಬೀರುತ್ತದೆ. ವಿಜಯೇಂದ್ರ ಅವರ ಹಿಂದೆ ಯಡಿಯೂರಪ್ಪ ಅವರ ಪ್ರಭಾವವಿದೆ. ಹೀಗಾಗಿ ಅವರ ಸಫಲತೆ ಹಾಗೂ ವಿಫಲತೆ ಎರಡೂ ಯಡಿಯೂರಪ್ಪ ಮೇಲೆ ಪ್ರಭಾವ ಬೀರುತ್ತದೆ.

 

ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತದೆ ಎಂದು ನಾನು ಹೇಳುವುದಿಲ್ಲ. ಯಡಿಯೂರಪ್ಪ ಅವರ ಸಂಪೂರ್ಣ ಶಕ್ತಿ ಬಳಸಿಕೊಳ್ಳಲು ಈ ರೀತಿ ಮಾಡಿದ್ದಾರೆ. ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ತೊಂದರೆಗಳಿಲ್ಲ. ಈಗಾಗಲೇ ಕಾಂಗ್ರೆಸ್ ತನ್ನ ಸಾಮರ್ಥ್ಯವನ್ನು ಪ್ರದರ್ಶನ ಮಾಡಿದೆ. ಬಿಜೆಪಿ ಈ ಆಯ್ಕೆಯಿಂದ ಅವರ ಆಂತರಿಕ ಕಲಹ, ಭ್ರಷ್ಟಾಚಾರ ಯಾವುದೂ ಕೂಡ ಮಾಯವಾಗುವುದಿಲ್ಲ. ಅವರ ಕೆಲಸಕ್ಕಾಗಿ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಂಡಿದ್ದಾರೆಯೇ ಹೊರತು ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!