Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೇದಿಕೆ ಮೇಲೆ ತಬ್ಬಿಕೊಳ್ಳುವಂತೆ ಮಾಡಿದರು.. ಇಳಿದ ಮೇಲೆ ಮತ್ತದೆ ಕಿತ್ತಾಟ : ಸಿದ್ದಾರಾಮಯ್ಯ, ಡಿಕೆಶಿ ಬಗ್ಗೆ ಬಿಜೆಪಿ ಟಾಂಗ್..!

Facebook
Twitter
Telegram
WhatsApp

 

ಬೆಂಗಳೂರು: ರಾಹುಲ್ ಗಾಂಧಿ ಸ್ಟೇಜ್ ಮೇಲೆ @siddaramaiah ಮತ್ತು @DKShivakumar ರನ್ನು ತಬ್ಬಿಕೊಳ್ಳುವಂತೆ ಮಾಡಿದರೂ ಕೆಳಗಿಳಿದು ಮತ್ತದೇ ಕಿತ್ತಾಟ ಶುರು ಮಾಡುವುದನ್ನು ನೋಡಿ, ಬೇಸತ್ತು @kharge ಯವರನ್ನು ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಟ್ಟರು, ಸೋಜಿಗವೆಂದರೆ ಖರ್ಗೆಯವರೇ ಮತ್ತೊಂದು ಗುಂಪಿನ ನಾಯಕ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಇಬ್ಬರು ನಾಯಕರನ್ನು ದಿಲ್ಲಿಗೆ ಕರೆದು ಸಮಾಧಾನ ಮಾಡುವಷ್ಟರಲ್ಲಿ ಈಗ ಉಭಯ ನಾಯಕರ ಬಣಗಳು ಕಿತ್ತಾಟ ಶುರು ಮಾಡಿಕೊಂಡಿರುವುದು @INCIndiaಗೆ ತಲೆ ಬಿಸಿ ಶುರುವಾಗಿದೆ. ಇದು ಕಪ್ಪೆಗಳನ್ನು ಹಿಡಿದು ಕೊಳಗ ತುಂಬಿದಂತಾಗಿದ್ದು, ಇವರ ಜಗಳವನ್ನೇ ಸುಧಾರಿಸುತ್ತಿದ್ದರೆ ಚುನಾವಣೆಗೆ ಹೊರಡುವುದು ಯಾವಾಗ ಎಂಬಂತಾಗಿದೆ!

ಈಗ ಅದೇ ಕಾರಣಕ್ಕೆ @siddaramaiah ನವರ ಸುತ್ತಲೂ ತಮ್ಮ ಬೆಂಬಲಿಗರ ಕೋಟೆ ಕಟ್ಟಿದ್ದು @DKShivakumar. ಈಗ ಒಳಜಗಳ ಕೇವಲ ಡಿಕೆಶಿ v/s ಸಿದ್ದರಾಮಯ್ಯನವರ ಮಧ್ಯೆಯಷ್ಟೇ ಆಗಿರದೇ ಉಭಯ ನಾಯಕರ ಬಣಗಳ ನಡುವೆ ಹೊತ್ತಿಕೊಂಡಿದೆ. ಆಯಾ ನಾಯಕರ ಬೆಂಬಲಿಗರು ಪ್ರತಿ ಕ್ಷೇತ್ರಗಳಲ್ಲಿ ಟಿಕೆಟ್ ಜಗಳ ಶುರು ಮಾಡಿಕೊಂಡಿದ್ದಾರೆ.

ಎಲ್ಲಿ ತನಗಿಂತ ಬೆಳೆದುಬಿಡುತ್ತಾರೋ ಎಂದು @DKShivakumar ಅಧ್ಯಕ್ಷರಾಗೋದನ್ನು ತಪ್ಪಿಸಲು @siddaramaiah ಹಿಂದೆ ಆಡಿದ ಆಟಗಳು ಒಂದೆರಡಲ್ಲ. 17 ಜನ ನಾಯಕರನ್ನು ದಿಲ್ಲಿಗೆ ಕರೆದೊಯ್ದು, ಡಿಕೆಶಿಯನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಡಿ ಎಂದು ಹಿಂದಿನಿಂದ ಬಾಣ ಬಿಟ್ಟಿದ್ದನ್ನು ಡಿಕೆಶಿ ಇನ್ನೂ ಮರೆತಿಲ್ಲ.

ಇವರಿಬ್ಬರ ಜಗಳದಲ್ಲಿ @DrParameshwara ಮತ್ತು @kharge ನಡುವೆ ಪೈಪೋಟಿ ಶುರುವಾಗಿದೆ. ಎಲ್ಲಿ ಖರ್ಗೆ ಬಂದುಬಿಟ್ಟಾರೋ ಎಂದು ಪರಮೇಶ್ವರ್ ಮೆಲ್ಲಗೆ ಕುರ್ಚಿಗೆ ಟವೆಲ್ ಹಾಸಿ ಕುಳಿತಿದ್ದಾರೆ. ಈ ವಿಷಯ ತಿಳಿದಿರುವ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಹೊಸ ಖೆಡ್ಡವನ್ನು ತೋಡುತ್ತಿದ್ದಾರೆ!

ಕಾಂಗ್ರೆಸ್ಗೆ “ಪವರ್ ಕ್ಯಾನ್ಸರ್” ಶುರುವಾಗಿದೆ. @siddaramaiah ಮತ್ತು @DKShivakumar ಇಬ್ಬರೂ ಒಬ್ಬರಿಗಿಂತ ಇನ್ನೊಬ್ಬರು ಪವರ್ಫುಲ್ ಎಂದು ತೋರಿಸಿಕೊಳ್ಳುವ, ಹಾಗೇ ಮುಖ್ಯಮಂತ್ರಿ ಅಭ್ಯರ್ಥಿ ನಾನೇ ಎಂಬ ಸಂದೇಶ ರವಾನಿಸುವುದರಲ್ಲೇ ತಮ್ಮ ಶಕ್ತಿ ವ್ಯಯಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!