Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಟಿ ಸೋಮಶೇಖರ್ ಉಳಿಸಿಕೊಳ್ಳಲು ಬಿಜೆಪಿ ಕಸರತ್ತು : ದೂರು ನೀಡಿದ್ದವರನ್ನೇ ಉಚ್ಚಾಟನೆ ಮಾಡಿದ ಬಿಜೆಪಿ..!

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಗಾಗಿ ಭರ್ಜರಿ ಕಸರತ್ತು ನಡೆಸುತ್ತಿದೆ. ಅದರಲ್ಲೂ ಕಾಂಗ್ರೆಸ್ ಬಿಟ್ಟು ಹೋದವರನ್ನ ಮತ್ತೆ ಕಾಂಗ್ರೆಸ್ ಗೆ ಕರೆತರುವ ಕೆಲಸವಾಗುತ್ತಿದೆ. ಇದರ ನಡುವೆ ಬಿಜೆಪಿ ನಾಯಕರು ಹೈ ಅಲರ್ಟ್ ಆಗಿದ್ದಾರೆ. ಕೆಲವರನ್ನು ಬಿಜೆಪಿಯಲ್ಲಿಯೆ ಉಳಿಸಿಕೊಳ್ಳಲು ಮೂಲ ಬಿಜೆಪಿಗರಿಗೆ ಶಿಕ್ಷೆ ನೀಡಲು ಮುಂದಾಗಿದೆ. ಅದರಲ್ಲೂ ಎಸ್ ಟಿ ಸೋಮಶೇಖರ್ ಅವರನ್ನು ಉಳಿಸಿಕೊಳ್ಳುವುದಕ್ಕಾಗಿಯೇ ಕೆಲವರನ್ನು ಉಚ್ಛಾಟನೆ ಮಾಡಿದೆ.

ಎಸ್ ಟಿ ಸೋಮಶೇಖರ್ ಅವರನ್ನು ತಮ್ಮ ಪಕ್ಷದಲ್ಲಿಯೇ ಉಳಿಸಿಕೊಳ್ಳುವುದಕ್ಕಾಗಿ, ಸರಣಿ ಸಭೆ ನಡೆಸುತ್ತಿದ್ದಾರೆ. ಅದರಲ್ಲೂ ಸೋಮಶೇಖರ್ ಅವರು ಅಸಮಾಧನ ಹೊರ ಹಾಕಿದವರನ್ನೇ ಬಿಜೆಪಿ ಉಚ್ಛಾಟನೆ ಮಾಡಿದೆ. ಯಶವಂತಪುರದ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮಾರೇಗೌಡ, ಮಾಜಿ ಉಪಾಧ್ಯಕ್ಷ ಧನಂಜಯ ಅವರನ್ನು ಉಚ್ಛಾಟನೆ ಮಾಡಿ, ಪಕ್ಷ ಆದೇಶ ಹೊರಡಿಸಿದೆ‌.

ಈ ಇಬ್ಬರು ಯಶವಂತಪುರ ಕ್ಷೇತ್ರದಲ್ಲಿಯೇ ಸೋಮಶೇಖರ್ ವಿರುದ್ಧ ಕೆಲಸ ಮಾಡುತ್ತಿದ್ದರು ಎಂದು ಅಸಮಾಧಾನ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ ಇತ್ತಿಚೆಗೆ ಸೋಮಶೇಖರ್ ಅವರ ಭಾವಚಿತ್ರವಾಕಿ ಹುಟ್ಟುಹಬ್ಬ ಆಚರಣೆ ಮಾಡಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದ ಆರೋಪವೂ ಕೇಳಿ ಬಂದಿತ್ತು. ಇವರಿಬ್ಬರ ಮೇಲೆ ಎಸ್ ಟಿ ಸೋಮಶೇಖರ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಆ ಇಬ್ಬರನ್ನು ಪಕ್ಷದಿಂದ ಹೊರ ಹಾಕಿ, ಸೋಮಶೇಖರ್ ಅವರಿಗೆ ಸಮಾಧಾನ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!