Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲಾರ ಜನತೆಯ ‘ಕೈ’ಗೆ ಚಿಪ್ಪು : ಬಿಜೆಪಿಯಿಂದ ಪ್ರಶ್ನೆಗಳ ಸುರಿಮಳೆ

Facebook
Twitter
Telegram
WhatsApp

 

ಬೆಂಗಳೂರು: ಕೋಲಾರದ ವಿಚಾರಕ್ಕೆ ಬಿಜೆಪಿ, ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದೆ. ಕೋಲಾರ ಜನತೆಯ “ಕೈ”ಗೆ ಚಿಪ್ಪು ಕೊಟ್ಟು, ಈಗ ಚುನಾವಣೆಗಾಗಿ ಅವರ ಕಾಲು ಹಿಡಿಯಲು ಹೊರಟಿರುವ ಸಿಎಂ @siddaramaiah ಅವರೇ, ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!

▪️ಕೋಲಾರದ ಶಾಸಕರಿಗೆ ಮಂತ್ರಿಗಿರಿ ನೀಡಲಿಲ್ಲ ಏಕೆ?
▪️ಜಿಲ್ಲೆಯ ರೈತರ ಹಾಲಿಗೆ ಇನ್ನೂ ₹7 ಸಬ್ಸಿಡಿ ನೀಡಿಲ್ಲ ಏಕೆ?
▪️ಮಾವು ಬೆಳೆಗಾರರಿಗೆ ನೀಡಿದ ಆಶ್ವಾಸನೆ ಈಡೇರಿಸಿಲ್ಲ ಏಕೆ?
▪️ಸಿಎಂ ಆದ ತಕ್ಷಣವೇ ಜಿಲ್ಲೆಯನ್ನು ಜಿಹಾದಿಗಳಿಗೆ ಅಡವಿಟ್ಟಿದ್ದೇಕೆ?
▪️ಶಾಂತಿ ಆವರಿಸಿದ್ದ ಕೋಲಾರದಲ್ಲಿ ಅಶಾಂತಿ ಸೃಷ್ಟಿಸಿದ್ದೇಕೆ?
▪️ಕೋಲಾರದಲ್ಲಿ ರೈತ ಮಾಲ್ ಸ್ಥಾಪನೆ ಮಾಡುವುದು ಯಾವಾಗ?

 

ಸಿದ್ದರಾಮಯ್ಯರವರೇ, ಚಿನ್ನದ ಭೂಮಿ ಕೋಲಾರಮ್ಮನ ನಾಡಿಗೆ ಕಾಲಿಡುವುದಕ್ಕೆ ಯಾವ ನೈತಿಕತೆ ಉಳಿಸಿಕೊಂಡಿದ್ದೀರಿ. ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!? ಎಂದು ಟ್ವೀಟ್ ಮಾಡಿದೆ.

 

ಯುವನಿಧಿಯ ಬಗ್ಗೆಯೂ ಟ್ವೀಟ್ ಮಾಡಿ, ಯುವಜನತೆಗೆ ಸಿದ್ದರಾಮಯ್ಯ ಸರ್ಕಾರ ವಂಚಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿಯಲ್ಲಿ ಪದವಿ ಮತ್ತು ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಾಸಿಕ ತಲಾ 3 ಸಾವಿರ ಹಾಗೂ 1500 ರೂಪಾಯಿ ನೀಡುವುದಾಗಿ ಘೋಷಿಸಿತ್ತು. ಆದರೆ ಇಂದು 2022-23 ರಲ್ಲಿ ತೇರ್ಗಡೆ ಹೊಂದಿದ 3 ರಿಂದ 4 ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ಯುವನಿಧಿ ಬಿಡುಗಡೆ ಮಾಡುವ ಮೂಲಕ ತಾರಮ್ಯದ ನಡೆ ಪ್ರದರ್ಶಿಸುತ್ತಿದೆ‌ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!