ಬೆಂಗಳೂರು: ಕೋಲಾರದ ವಿಚಾರಕ್ಕೆ ಬಿಜೆಪಿ, ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದೆ. ಕೋಲಾರ ಜನತೆಯ “ಕೈ”ಗೆ ಚಿಪ್ಪು ಕೊಟ್ಟು, ಈಗ ಚುನಾವಣೆಗಾಗಿ ಅವರ ಕಾಲು ಹಿಡಿಯಲು ಹೊರಟಿರುವ ಸಿಎಂ @siddaramaiah ಅವರೇ, ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!
ಕೋಲಾರ ಜನತೆಯ "ಕೈ"ಗೆ ಚಿಪ್ಪು ಕೊಟ್ಟು, ಈಗ ಚುನಾವಣೆಗಾಗಿ ಅವರ ಕಾಲು ಹಿಡಿಯಲು ಹೊರಟಿರುವ ಸಿಎಂ @siddaramaiah ಅವರೇ, ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!
▪️ಕೋಲಾರದ ಶಾಸಕರಿಗೆ ಮಂತ್ರಿಗಿರಿ ನೀಡಲಿಲ್ಲ ಏಕೆ?
▪️ಜಿಲ್ಲೆಯ ರೈತರ ಹಾಲಿಗೆ ಇನ್ನೂ ₹7 ಸಬ್ಸಿಡಿ ನೀಡಿಲ್ಲ ಏಕೆ?
▪️ಮಾವು ಬೆಳೆಗಾರರಿಗೆ ನೀಡಿದ ಆಶ್ವಾಸನೆ ಈಡೇರಿಸಿಲ್ಲ ಏಕೆ?…— BJP Karnataka (@BJP4Karnataka) December 27, 2023
▪️ಕೋಲಾರದ ಶಾಸಕರಿಗೆ ಮಂತ್ರಿಗಿರಿ ನೀಡಲಿಲ್ಲ ಏಕೆ?
▪️ಜಿಲ್ಲೆಯ ರೈತರ ಹಾಲಿಗೆ ಇನ್ನೂ ₹7 ಸಬ್ಸಿಡಿ ನೀಡಿಲ್ಲ ಏಕೆ?
▪️ಮಾವು ಬೆಳೆಗಾರರಿಗೆ ನೀಡಿದ ಆಶ್ವಾಸನೆ ಈಡೇರಿಸಿಲ್ಲ ಏಕೆ?
▪️ಸಿಎಂ ಆದ ತಕ್ಷಣವೇ ಜಿಲ್ಲೆಯನ್ನು ಜಿಹಾದಿಗಳಿಗೆ ಅಡವಿಟ್ಟಿದ್ದೇಕೆ?
▪️ಶಾಂತಿ ಆವರಿಸಿದ್ದ ಕೋಲಾರದಲ್ಲಿ ಅಶಾಂತಿ ಸೃಷ್ಟಿಸಿದ್ದೇಕೆ?
▪️ಕೋಲಾರದಲ್ಲಿ ರೈತ ಮಾಲ್ ಸ್ಥಾಪನೆ ಮಾಡುವುದು ಯಾವಾಗ?
ಸಿದ್ದರಾಮಯ್ಯರವರೇ, ಚಿನ್ನದ ಭೂಮಿ ಕೋಲಾರಮ್ಮನ ನಾಡಿಗೆ ಕಾಲಿಡುವುದಕ್ಕೆ ಯಾವ ನೈತಿಕತೆ ಉಳಿಸಿಕೊಂಡಿದ್ದೀರಿ. ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!? ಎಂದು ಟ್ವೀಟ್ ಮಾಡಿದೆ.
ಯುವನಿಧಿಯ ಬಗ್ಗೆಯೂ ಟ್ವೀಟ್ ಮಾಡಿ, ಯುವಜನತೆಗೆ ಸಿದ್ದರಾಮಯ್ಯ ಸರ್ಕಾರ ವಂಚಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿಯಲ್ಲಿ ಪದವಿ ಮತ್ತು ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಾಸಿಕ ತಲಾ 3 ಸಾವಿರ ಹಾಗೂ 1500 ರೂಪಾಯಿ ನೀಡುವುದಾಗಿ ಘೋಷಿಸಿತ್ತು. ಆದರೆ ಇಂದು 2022-23 ರಲ್ಲಿ ತೇರ್ಗಡೆ ಹೊಂದಿದ 3 ರಿಂದ 4 ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ಯುವನಿಧಿ ಬಿಡುಗಡೆ ಮಾಡುವ ಮೂಲಕ ತಾರಮ್ಯದ ನಡೆ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














