Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು : ಬಿಜೆಪಿ ವ್ಯಂಗ್ಯ..!

Facebook
Twitter
Telegram
WhatsApp

 

 

ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಇದಕ್ಕೆ ಬಿಜೆಪಿ ಸರಣಿ ಟಾಂಗ್ ಕೊಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವ ಭ್ರಮೆಯಿಂದ ಗಾಜಿನ ಮನೆಯಲ್ಲಿ ಕುಳಿತು ಕಲ್ಲುಹೊಡೆಯುತ್ತಿದ್ದರು. ಈಗ ಆ ಕಲ್ಲನ್ನು ಇಬ್ರಾಹಿಂ ಅವರು ತಿರುಗಿಸಿ ಸಿದ್ದರಾಮಯ್ಯ ಅವರ ಗಾಜಿನ ಮನೆಗೆ ಎಸೆದಿದ್ದಾರೆ. ಸಿದ್ದರಾಮಯ್ಯ ಅವರೇ, ಅವರಿವರು ಬರುತ್ತಾರೆ ಎಂಬ ಭ್ರಮೆಯಿಂದ ಹೊರಗೆ ಬನ್ನಿ. ನಿಮ್ಮವರನ್ನು ಉಳಿಸಿಕೊಳ್ಳಿ.

ಸಿದ್ದರಾಮಯ್ಯನವರ ಜೊತೆಗೆ ಜನತಾ ಪರಿವಾರದ ಮಹದೇವಪ್ಪ, ಇಬ್ರಾಹಿಂ, ಉಗ್ರಪ್ಪ ಮೊದಲಾದವರು ಕಾಂಗ್ರೆಸ್ ಪಕ್ಷಕ್ಕೆ ಬಂದರು. #ಕಾಂಗ್ರೆಸ್‌ಕಲಹ ದಿಂದಾಗಿ ಅವರ್ಯಾರು ಈಗ ಸಿದ್ದರಾಮಯ್ಯ ಜೊತೆ ಉಳಿದಿಲ್ಲ. ಸ್ವಾರ್ಥಕ್ಕಾಗಿ ತಮ್ಮ ಗೆಳೆಯರ ಕತ್ತನ್ನೇ ಅವರು ಕೊಯ್ದಿದ್ದಾರೆ. ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಿದ್ದೇಕೆ ಎಂಬುದಕ್ಕೆ ಈಗ ಉತ್ತರ ಸಿಗುತ್ತಿದೆ.

ಇಬ್ರಾಹಿಂ ಅವರ ರಾಜೀನಾಮೆಯೊಂದಿಗೆ ಸಿದ್ದರಾಮಯ್ಯನವರ ಅಹಿಂದ ಮುಖ‌ ಕಳಚಿ ಬಿದ್ದಿದೆ. ಅಲ್ಪಸಂಖ್ಯಾತ ನಾಯಕ ಹಾಗೂ ತಮ್ಮ ಗೆಳೆಯನಿಗೆ ಕೊಟ್ಟ ಭರವಸೆಯನ್ನೇ‌ ನೀವು ಈಡೇರಿಸುವಲ್ಲಿ ಅಸಮರ್ಥರಾಗಿದ್ದೀರಿ. ಹೀಗಿರುವಾಗ ನಿಮ್ಮ ನಾಯಕತ್ವ ನಂಬಿ ಅನ್ಯಪಕ್ಷದವರು ಬರುತ್ತಾರೆಯೇ?.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳೆದ ಪರಿಸರವೇ ಬೇರೆ, ನಮ್ಮದು ಬೇರೆ. ಅವರ ಚಿಂತನೆಗಳೇ ಬೇರೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪಕ್ಷ‌ ಬಿಡುವುದಕ್ಕೆ ಮುನ್ನ ಡಿಕೆಶಿಯವರ ಪರಿಸರ ಮಹಾತ್ಮೆಯನ್ನು ಇನ್ನಷ್ಟು ವಿವರಿಸಬಹುದಿತ್ತಲ್ಲವೇ?.

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡ ಸಿ.ಎಂ.ಇಬ್ರಾಹಿಂ ಪಕ್ಷ ತ್ಯಜಿಸುವ ನಿರ್ಧಾರ ಮಾಡಿದ್ದಾರೆ‌. ಅಲ್ಪಸಂಖ್ಯಾತರಿಗೂ ಉಸಿರುಗಟ್ಟಿಸುವಂಥ ವಾತಾವರಣ ಕಾಂಗ್ರೆಸ್ ಪಕ್ಷದಲ್ಲಿ ಇದೆಯೆಂದಾದರೆ ಆ ಪಕ್ಷ ಕೇವಲ ಪ್ರಭಾವಿಗಳು ಹಾಗೂ ಗುಲಾಮರ ಕೂಟ ಎಂಬುದು ಸಾಬೀತಾದಂತಾಯಿತಲ್ಲವೇ?.

ಕಾಂಗ್ರೆಸ್‌ ಪರಿಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಕಾಂಗ್ರೆಸ್ ಸೇರುವವರ ಪಟ್ಟಿ ನಮ್ಮಲ್ಲಿದೆ ಎಂದು ಹೇಳುತ್ತಿರುವ ಕಾಂಗ್ರೆಸ್‌ ನಾಯಕರೇ, ಮೊದಲು ನಿಮ್ಮ ಪಕ್ಷದ ಬಾಗಿಲು ಭದ್ರಪಡಿಸಿಕೊಳ್ಳಿ. #ಕಾಂಗ್ರೆಸ್‌ಕಲಹ ದಿಂದಾಗಿ ಇಬ್ರಾಹಿಂ ಅವರು ಪಕ್ಷ ತೊರೆಯುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಬೀಗ ಜಡಿಯುವ ಸಮಯ ದೂರವೇನಿಲ್ಲ ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!