ಕಾಂಗ್ರೆಸ್ ಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು : ಬಿಜೆಪಿ ವ್ಯಂಗ್ಯ..!

 

 

ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಇದಕ್ಕೆ ಬಿಜೆಪಿ ಸರಣಿ ಟಾಂಗ್ ಕೊಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವ ಭ್ರಮೆಯಿಂದ ಗಾಜಿನ ಮನೆಯಲ್ಲಿ ಕುಳಿತು ಕಲ್ಲುಹೊಡೆಯುತ್ತಿದ್ದರು. ಈಗ ಆ ಕಲ್ಲನ್ನು ಇಬ್ರಾಹಿಂ ಅವರು ತಿರುಗಿಸಿ ಸಿದ್ದರಾಮಯ್ಯ ಅವರ ಗಾಜಿನ ಮನೆಗೆ ಎಸೆದಿದ್ದಾರೆ. ಸಿದ್ದರಾಮಯ್ಯ ಅವರೇ, ಅವರಿವರು ಬರುತ್ತಾರೆ ಎಂಬ ಭ್ರಮೆಯಿಂದ ಹೊರಗೆ ಬನ್ನಿ. ನಿಮ್ಮವರನ್ನು ಉಳಿಸಿಕೊಳ್ಳಿ.

ಸಿದ್ದರಾಮಯ್ಯನವರ ಜೊತೆಗೆ ಜನತಾ ಪರಿವಾರದ ಮಹದೇವಪ್ಪ, ಇಬ್ರಾಹಿಂ, ಉಗ್ರಪ್ಪ ಮೊದಲಾದವರು ಕಾಂಗ್ರೆಸ್ ಪಕ್ಷಕ್ಕೆ ಬಂದರು. #ಕಾಂಗ್ರೆಸ್‌ಕಲಹ ದಿಂದಾಗಿ ಅವರ್ಯಾರು ಈಗ ಸಿದ್ದರಾಮಯ್ಯ ಜೊತೆ ಉಳಿದಿಲ್ಲ. ಸ್ವಾರ್ಥಕ್ಕಾಗಿ ತಮ್ಮ ಗೆಳೆಯರ ಕತ್ತನ್ನೇ ಅವರು ಕೊಯ್ದಿದ್ದಾರೆ. ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಿದ್ದೇಕೆ ಎಂಬುದಕ್ಕೆ ಈಗ ಉತ್ತರ ಸಿಗುತ್ತಿದೆ.

ಇಬ್ರಾಹಿಂ ಅವರ ರಾಜೀನಾಮೆಯೊಂದಿಗೆ ಸಿದ್ದರಾಮಯ್ಯನವರ ಅಹಿಂದ ಮುಖ‌ ಕಳಚಿ ಬಿದ್ದಿದೆ. ಅಲ್ಪಸಂಖ್ಯಾತ ನಾಯಕ ಹಾಗೂ ತಮ್ಮ ಗೆಳೆಯನಿಗೆ ಕೊಟ್ಟ ಭರವಸೆಯನ್ನೇ‌ ನೀವು ಈಡೇರಿಸುವಲ್ಲಿ ಅಸಮರ್ಥರಾಗಿದ್ದೀರಿ. ಹೀಗಿರುವಾಗ ನಿಮ್ಮ ನಾಯಕತ್ವ ನಂಬಿ ಅನ್ಯಪಕ್ಷದವರು ಬರುತ್ತಾರೆಯೇ?.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳೆದ ಪರಿಸರವೇ ಬೇರೆ, ನಮ್ಮದು ಬೇರೆ. ಅವರ ಚಿಂತನೆಗಳೇ ಬೇರೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪಕ್ಷ‌ ಬಿಡುವುದಕ್ಕೆ ಮುನ್ನ ಡಿಕೆಶಿಯವರ ಪರಿಸರ ಮಹಾತ್ಮೆಯನ್ನು ಇನ್ನಷ್ಟು ವಿವರಿಸಬಹುದಿತ್ತಲ್ಲವೇ?.

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡ ಸಿ.ಎಂ.ಇಬ್ರಾಹಿಂ ಪಕ್ಷ ತ್ಯಜಿಸುವ ನಿರ್ಧಾರ ಮಾಡಿದ್ದಾರೆ‌. ಅಲ್ಪಸಂಖ್ಯಾತರಿಗೂ ಉಸಿರುಗಟ್ಟಿಸುವಂಥ ವಾತಾವರಣ ಕಾಂಗ್ರೆಸ್ ಪಕ್ಷದಲ್ಲಿ ಇದೆಯೆಂದಾದರೆ ಆ ಪಕ್ಷ ಕೇವಲ ಪ್ರಭಾವಿಗಳು ಹಾಗೂ ಗುಲಾಮರ ಕೂಟ ಎಂಬುದು ಸಾಬೀತಾದಂತಾಯಿತಲ್ಲವೇ?.

ಕಾಂಗ್ರೆಸ್‌ ಪರಿಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಕಾಂಗ್ರೆಸ್ ಸೇರುವವರ ಪಟ್ಟಿ ನಮ್ಮಲ್ಲಿದೆ ಎಂದು ಹೇಳುತ್ತಿರುವ ಕಾಂಗ್ರೆಸ್‌ ನಾಯಕರೇ, ಮೊದಲು ನಿಮ್ಮ ಪಕ್ಷದ ಬಾಗಿಲು ಭದ್ರಪಡಿಸಿಕೊಳ್ಳಿ. #ಕಾಂಗ್ರೆಸ್‌ಕಲಹ ದಿಂದಾಗಿ ಇಬ್ರಾಹಿಂ ಅವರು ಪಕ್ಷ ತೊರೆಯುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಬೀಗ ಜಡಿಯುವ ಸಮಯ ದೂರವೇನಿಲ್ಲ ಎಂದು ಟ್ವೀಟ್ ಮಾಡಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago