Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೌಡಿಗಳನ್ನು ಸೇರಿಸಲ್ಲ ಎಂದಿದ್ದ ಬಿಜೆಪಿ.. ಹೆಸರು ಬದಲಾವಣೆ ಮಾಡಿಕೊಂಡು ಬಿಜೆಪಿ ಸೇರಿದ ರೌಡಿಶೀಟರ್.. ಈಗ ಪ್ರತಿಪಕ್ಷಗಳ ರಿಯಾಕ್ಷನ್ ಏನು..?

Facebook
Twitter
Telegram
WhatsApp

 

ಮೈಸೂರು: ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ನಾಯಕರಿದ್ದ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ. ಬಳಿಕ ಬಿಜೆಪಿಯನ್ನು ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ವಿಚಾರವನ್ನಿಟ್ಟುಕೊಂಡು ಬಿಜೆಪಿ ನಾಯಕರನ್ನು ಸಿಕ್ಕಾಪಟ್ಟೆ ವ್ಯಂಗ್ಯ ಮಾಡುವುದಕ್ಕೆ ಶುರು ಮಾಡಿದರು. ಬಿಜೆಪಿ ಈಗ ರೌಡಿಗಳ ಆಪರೇಷನ್ ಮಾಡುತ್ತಿದೆ ಎಂದೆಲ್ಲಾ ಟಾಂಗ್ ಗಳು ಕೇಳಿ ಬಂದಿತ್ತು.

ಇದನ್ನೆಲ್ಲಾ ಕೇಳಿಸಿಕೊಂಡ ಬಿಜೆಪಿ ನಾವೂ ಯಾವುದೇ ಕಾರಣಕ್ಕೂ ರೌಡಿಗಳನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ. ಸಮಾಜಘಾತುಕರಿಗೆ ನಮ್ಮ ಬಿಜೆಪಿಯಲ್ಲಿ ಅವಕಾಶವಿಲ್ಲ ಎಂದು ಘಂಟಾಘೋಷವಾಗಿ ಸಾರಿತ್ತು. ಆದ್ರೆ ಈಗ ರೌಡಿಶೀಟರ್ ಒಬ್ಬರ ತನ್ನ ಹೆಸರು ಬದಲಾಯಿಸಿಕೊಂಡು ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.

ರೌಡಿಶೀಟರ್ ಬೆತ್ತನಗೆರೆ ಸೀನನ ಸಹೋದರನಾದ ಬೆತ್ತನಗೆರೆ ಶಂಕರ ಹೆಸರು ಬದಲಾಯಿಕೊಂಡು ಬಿಜೆಪಿ ಸೇರ್ಪಡೆಯಾಗಿದ್ದಾನೆ ಎಂಬ ಸುದ್ದಿ ತಡವಾಗಿ ಬೆಲಕಿಗೆ ಬಂದಿದೆ. ಅದಕ್ಕೆ ಸಂಬಂಧಪಟ್ಟ ಫೋಟೋಗಳು ವೈರಲ್ ಆಗುತ್ತಿವೆ. ಇದೇ ವರ್ಷ ಮೇ ತಿಂಗಳಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ.

ಸಂಸದ ಪ್ರತಾಪ್ ಸಿಂಹ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ನೇತೃತ್ವದಲ್ಲಿ ಬೆತ್ತನಗೆರೆ ಶಂಕರ ತನ್ನ ಹೆಸರನ್ನು ನೆಲ್ಲೂರು ಶಂಕರೇಗೌಡ ಎಂದು ಬದಲಾಯಿಸಿಕೊಂಡು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈತ ಈ ಹಿಂದೆಯೇ ಹೆಚ್ ಕೋಟೆಯ ಜಿಲ್ಲಾ ಪಂಚಾಯತ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದನಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

error: Content is protected !!