Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

---Advertisement---

 

ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ವಿರುದ್ಧ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರನನ್ನು ನಾನೆಂದು ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಿದೆ‌. ವಿಜಯೇಂದ್ರ ಪಕ್ಷದಲ್ಲಿ ಇನ್ನೂ ಜೂನಿಯರ್. ಅವನಿಗೆ ಏನು ಐಡಿಯಾಲಜಿ ಇಲ್ಲ. ಅವನು ಅಧ್ಯಕ್ಷನಾಗಿದ್ದಕ್ಕೆ ನನ್ನ ವಿರೋಧವಿದೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪನವರ ಬಗ್ಗೆ ಬಹಳ ಗೌರವವಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಸಲಹೆ ಬೇಕಾದರೆ ಯಡಿಯೂರಪ್ಪ ಅವರ ಮನೆಗೆ ಹೋಗುತ್ತೇವೆ ಎಂದಿದ್ದಾರೆ.

ಇದೆ ವೇಳೆ ಮುನಿರತ್ನ ಬಂಧನದ ಬಗ್ಗೆ ಮಾತನಾಡಿ, ಮುನಿರತ್ನ ಅವರು ಬೈದಿರುವುದು ಸಾಬೀತೆ ಆಗಿಲ್ಲ. ಆಗಲೇ ನಮ್ಮ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೂ ನಮ್ಮವರು ಮಾತನಾಡಬಾರದು. ಮುನಿರತ್ನ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರೇ ಒತ್ತಡ ಹಾಕುತ್ತಿದ್ದಾರೆ. ಹಿಂದೆ ಮುಂದೆ ನೋಡದೆ ಈ ರೀತಿ ಮಾತನಾಡುವುದು ಸರಿಯಲ್ಲ. ಮುನಿರತ್ನ ಬೈದಿರುವುದು ದೃಢವಾಗಿಲ್ಲ. ಅವರ ಬೈಗುಳ ಕಟ್ ಅಂಡ್ ಪೇಸ್ಟ್ ಇರಬಹುದು. ಮುನಿರತ್ನ ವಿಚಾರದಲ್ಲಿ ನಮ್ಮವರು ದುಡಿಕಿನ ನಿರ್ಧಾರ ಮಾಡುತ್ತಿದ್ದಾರೆ. ಅವರ ವಿರುದ್ದ ವರಿಷ್ಠರು ನೋಟೀಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment