ಪಂಚರಾಜ್ಯಗಳ ಹಾಗೂ ದಾವಣಗೆರೆ, ಬಾಗಲಕೋಟೆ ಬೈ ಎಲೆಕ್ಷನ್ ಮತ ಎಣಿಕೆ ಇಂದು ನಡೆಯುತ್ತಿದೆ. ಈಗಾಗಲೇ ದಾವಣಗೆರೆಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ ಸಾಧಿಸಿದ್ದಾರೆ. ಆರಂಭದಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರೇ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
4,683 ಮತಗಳ ಮುನ್ನಡೆಯನ್ನು ಶ್ರೀನಿವಾಸ್ ದಾಸಕರಿಯಪ್ಪ ಸಾಧಿಸಿದ್ದಾರೆ. ಈ ಮೂಲಕ ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆಯಾಗಿದೆ. ಮೂರನೇ ಸುತ್ತಿನ ಮತ ಎಣಿಕೆಯೂ ಮುಕ್ತಾಯವಾಗಿದೆ.

ಬಾಗಲಕೋಟೆಯಲ್ಲಿ ಏಳನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು ಅದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚರಂತಿಮಠ ವಿರುದ್ಧ ಉಮೇಶ್ ಮೇಟಿ 12,710 ಮತಗಳ ಅಂತರದಲ್ಲಿದ್ದಾರೆ.


















