ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಹೆಚ್ಚಿನ ಸಮಯವನ್ನು ಕಾಂಗ್ರೆಸ್ ನಾಯಕರ ಜೊತೆಯಲ್ಲಿಯೇ ಕಳೆಯುತ್ತಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷದಿಂದ ಅಮಾನತು ಮಾಡಬೇಕೆಂದು ಒತ್ತಾಯ ಕೇಳಿ ಬರುತ್ತಿದೆ. ಈಗಾಗಲೇ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಉಚ್ಛಾಟನೆ ಮಾಡುವ ಸಂಬಂಧ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಹಲವು ತಿಂಗಳಿನಿಂದ ಕೆಲವು ಮುಖಂಡರ ನಡವಳಿಕೆಗೆ ಕಡಿವಾಣ ಹಾಕಲು ಹಾಗೂ ವುಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೇಂದ್ರದ ವರಿಷ್ಠರಿಗೆ ಮನವಿ ಮಾಡಲಾಗಿದೆ. ಬಿಜೆಪಿ ಚಿಹ್ನೆಯಡಿ ಗೆದ್ದು ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು ಕಳೆದ ಹಲವು ತಿಂಗಳಿನಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲು ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಜೊತೆಗೆ ಅಧಿಕೃತವಾಗಿ ತಮ್ಮನ್ನು ತಾವೂ ಗುರಿತಿಸಿಕೊಂಡಿದ್ದಾರೆ. ಈ ವಿಚಾರವನ್ನು ಬಹಳ ಹಿಂದೆಯೇ ಚರ್ಚೆ ಮಾಡಲಾಗಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕಲು ಹಾಗೂ ಬಿಗಿಯಾದ ಕ್ರಮ ಕೈಗೊಳ್ಳಲು ಕೋರ್ ಕಮಿಟಿ ಸರ್ವಾನುಮತದಿಂದ ಕೋರಿದೆ ಎಂದಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಎಸ್.ಟಿ.ಸೋಮಶೇಖರ್, ‘ಸಂತೋಷವಾಗಿ ಸ್ವಾಗತ ಮಾಡ್ತಾ ಇದ್ದೀನಿ. ನಾನು ಹೆಬ್ಬಾರ್.. ನಾನು ಒಂದು ಕ್ಷೇತ್ರದ ಶಾಸಕ. ಅವನು ಒಂದು ಕ್ಷೇತ್ರದ ಶಾಸಕ. ಇವರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಡುವುದಕ್ಕೆ ಹೊರಟಿದ್ದಾರೆ. ಪಕ್ಷಕ್ಕೆ ಡ್ಯಾಮೇಜ್ ಮಾಡುವಂತವರೆ ಇಡೀ ರಾಜ್ಯಕ್ಕೆ ಯಾರೂ ಡ್ಯಾಮೇಜ್ ಮಾಡ್ತಾ ಇದಾರೆ ಎಂಬುದಾಗಿ ನೋಡ್ತಾ ಇದಾರೆ. ನಾವೂ ಯಾವತ್ತಿಗೂ ಪಕ್ಷಕ್ಕಾಗಲೀ, ಅಧ್ಯಕ್ಷರಿಗಾಗಲಿ ಡ್ಯಾಮೇಜ್ ಮಾಡುವುದಕ್ಕೆ ಹೋಗಿಲ್ಲ. ಅಮಾನತು ಮಾಡಿದ್ರು ಅಲಿಗೇಷನ್ ಮಾಡಲ್ಲ.. ತೆಗೆದು ಹಾಕಿದ್ರು ಅಲಿಗೇಷನ್ ಮಾಡಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್