Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿಯ ಪ್ರಯತ್ನ ಯಶಸ್ಸಾಗಲ್ವ..? ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರೋದು ಪಕ್ಕನಾ..?

---Advertisement---

 

 

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ನಾಯಕರು ವಲಸೆ ಹೋಗ್ತಾರೆ ಅನ್ನೋದೇ ಬಾರೀ ಚರ್ಚೆವೆ ಗ್ರಾಸವಾಗಿದೆ. ಅದರಲ್ಲೂ ಬಿಜೆಪಿಗೆ ಬಂದು ಘಟಾನುಘಟಿ ಎನಿಸಿಕೊಂಡವರು ಮರಳುತ್ತಾರೆ ಎಂಬುದೇ ಬಿಜೆಪಿಗೆ ಹೆಚ್ಚಿನ ತಲೆನೋವಾಗಿದೆ. ಇರುವ ನಾಯಕರನ್ನು ಉಳಿಸಿಕೊಳ್ಳಲು ಬಿಜೆಪಿ ಕೂಡ ಸಾಕಷ್ಟು ಪ್ರಯತ್ನ ಪಡ್ತಾ ಇದೆ. ಅದರಲ್ಲೂ ಎಸ್ ಟಿ ಸೋಮಶೇಖರ್ ಅವರನ್ನ ತಮ್ಮ ಪಕ್ಷದಲ್ಲಿಯೇ ಉಳಿಸಿಕೊಳ್ಳಲು, ಅಸಮಾಧಾನ ಹೊರಹಾಕಿದ್ದಂತವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದರ‌ ಬೆನ್ನಲ್ಲೆ ಮತ್ತೊಂದು ಶಾಕಿಂಗ್ ಬೆಳವಣಿಗೆ ನಡೆದಿದೆ. ಎಸ್ ಟಿ ಸೋಮಶೇಖರ್, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಂದಿದ್ದಾರೆ.

ಎಸ್ ಟಿ ಸೋಮಶೆಖರ್ ಇಂದು ಸರ್ಕಾರಿ‌ ನಿವಾಸಕ್ಕೆ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ನಡೆಸಿದ್ದಾರೆ. ಅದು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ. ಈ ದಿಡೀರ್ ಭೇಟಿ ಹಾಗೂ ಚರ್ಚೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಮುನ್ಸೂಚನೆಯ ಇದು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.

ಎಸ್ ಟಿ ಸೋಮಶೇಖರ್ ಸದ್ಯ ತಮ್ಮ ಕ್ಷೇತ್ರದ ಸಮಸ್ಯೆ, ಅಭಿವೃದ್ಧಿಗಳ ಬಗ್ಗೆ ಸಿಎಂ ಬಳಿ ಚರ್ಚಿಸಿದ್ದಾರೆ. ಅದರ ಜೊತೆಗೆ ಪ್ರಸ್ತುತ ರಾಜಕೀಯದ ವಿಚಾರವನ್ನು ಚರ್ಚಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಆಪರೇಷನ್ ಹಸ್ತದ ಆರೋಪಗಳು ಕೇಳಿ ಬಂದಿವೆ. ಕಾಂಗ್ರೆಸ್ ನವರು ಲೋಕಸಭಾ ಚುಮಾವಣೆಯಲ್ಲಿ ಗೆಲ್ಲುವುದಕ್ಕೆ ನಮ್ಮವರನ್ನು ಸೆಳೆಯುತ್ತಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿದೆ. ಇದರ ನಡುವೆಯೇ ಇಂತಹ ಬೆಳವಣಿಗೆಗಳು ನಡೆಯುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...