ಸುದ್ದಿಒನ್,ಬೆಂಗಳೂರು,ಮೇ.24 : ರಾಜ್ಯದಲ್ಲಿ ಮುಂದಿನ 2028ರ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕಮಲ ಪಡೆ ಅದಕ್ಕಾಗಿ ಈಗಿನಿಂದಲೇ ಭರ್ಜರಿ ತಾಲೀಮು ಆರಂಭಿಸಿದೆ.
ಇದರ ಮೊದಲ ಹೆಜ್ಜೆಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸರಣಿ ಸಭೆಗಳನ್ನು ನಡೆಸುವ ಮೂಲಕ ರಾಜ್ಯ ನಾಯಕರಿಗೆ ಹೈವೋಲ್ಟೇಜ್ ಟಾಸ್ಕ್ ನೀಡಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ ನಿತಿನ್ ನಬಿನ್ ಅವರಿಗೆ ಮಲ್ಲೇಶ್ವರಂನ ಪಕ್ಷದ ಕಚೇರಿ ‘ಜಗನ್ನಾಥ ಭವನ’ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಪ್ರಮುಖ ಸಂಘಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ನಿತಿನ್ ನಬಿನ್ ಅವರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ಹಾಗೂ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಮೋದಿ ಸರ್ಕಾರದ ಜನಪರ ಯೋಜನೆಗಳು ಮತ್ತು ಐತಿಹಾಸಿಕ ಸಾಧನೆಗಳನ್ನು ರಾಜ್ಯದ ಮೂಲೆ ಮೂಲೆಗೂ ಹಾಗೂ ಪ್ರತಿಯೊಂದು ಹಳ್ಳಿಗೂ ತಲುಪಿಸಬೇಕು ಎಂದು ಅವರು ಹೆಳಿದ್ದಾರೆ.
ಇದೇ ವೇಳೆ ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು, ಸಾಲು ಸಾಲು ಹಗರಣಗಳು ಮತ್ತು ಜನವಿರೋಧಿ ನೀತಿಗಳ ವಿರುದ್ಧ ಮೌನವಾಗಿರದೆ ಬೀದಿಗಿಳಿದು ಉಗ್ರ ಹೋರಾಟ ರೂಪಿಸಬೇಕು ಎಂದು ಕರೆ ನೀಡಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಗಳನ್ನು ಗೆಲ್ಲಲು ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವುದು ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಬೂತ್ ಮಟ್ಟದ ಬಲವರ್ಧನೆಗಾಗಿ ವಿಶೇಷ ನೀಲನಕ್ಷೆಯನ್ನು ಸಭೆಯಲ್ಲಿ ಸಿದ್ಧಪಡಿಸಲಾಗಿದೆ.
ಪಕ್ಷದ ಸಂಘಟನೆಯನ್ನು ಚುರುಕುಗೊಳಿಸುವ ಈ ಮಹತ್ವದ ಸಭೆಯಲ್ಲಿ ಕರ್ನಾಟಕ ಬಿಜೆಪಿಯ ಪ್ರಮುಖ ನಾಯಕರ ದಂಡೇ ನೆರೆದಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗ್ರವಾಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ರಾಜ್ಯ ನಾಯಕರು ಭಾಗವಹಿಸಿದ್ದರು.
Today in Karnataka, participated in a meeting with MPs, MLAs, MLCs, State Office Bearers, and Morcha State Presidents & General Secretaries. The session also included State Media, Social Media & IT Department Convenors, Division & District Incharges, District Presidents, and the… pic.twitter.com/6imO1Bfek6
— Nitin Nabin (@NitinNabin) May 24, 2026
Tried my hand at the traditional Dollu at Shri Kadu Malleshwara Swamy Temple and cherished the beauty of Karnataka’s Janapada culture.
ಕರ್ನಾಟಕದ ಶ್ರೀ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಮೂಲಕ ನಾಡಿನ ಜಾನಪದ ಕಲೆಯ ಸೊಬಗನ್ನು ಸವಿದೆ. pic.twitter.com/tLjCaGGnS3
— Nitin Nabin (@NitinNabin) May 24, 2026
BJP National President Shri @NitinNabin met with the senior BJP leader and former Chief Minister of Karnataka, Shri
B.S. Yediyurappa in Bengaluru.Glimpses from the meeting. ⬇️ pic.twitter.com/1V7sX6TEvt
— BJP (@BJP4India) May 24, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.






















