Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯ ರಾಜಾಹುಲಿ ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವಂತೆ..!

---Advertisement---

ಬೆಳಗಾವಿ: ಕರ್ನಾಟಕದಲ್ಲಿ ಬಿಜೆಪಿಯನ್ನು ಸ್ಟ್ರಾಂಗ್ ಆಗಿ ಕಟ್ಟಿದ್ದೆ ಬಿ ಎಸ್ ಯಡಿಯೂರಪ್ಪ. ಆದ್ರೆ ಈಗ ಅವರನ್ನೇ ಪಕ್ಷದಿಂದ ಮೂಲೆಗುಂಪು ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕದಲ್ಲಿ ಬಿಎಸ್ವೈ ಅವರನ್ನು ಕಡೆಗಣಿಸಿದರೆ ಬಿಜೆಪಿಗೆ ನಷ್ಟ ಎಂಬುದು ಗೊತ್ತಿರುವ ವಿಚಾರ. ಆದ್ರೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಘೋಷಣೆ ಮಾಡಿದ್ದಾರೆ.

ಸಿಎಂ ಸ್ಥಾನದಿಂದ ಅರ್ಧಕ್ಕೆ ಇಳಿದ ಬಳಿಕ ಯಡಿಯೂರಪ್ಪ ಅವರಗೆ ಪಕ್ಷದಿಂದ ಕೆಲವೊಂದಿಷ್ಟು ಬೇಸರದ ಸಂಗತಿಗಳು ಎದುರಾದರೂ ಸಹ ಜಿಲ್ಲೆ ಜಿಲ್ಲೆಗೆ ತೆರಳಿ ಪಕ್ಷ ಸಂಘಟನೆ ಮಾಡಿದ್ದಾರೆ, ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ತಮ್ಮ ಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿದ ಬಿಎಸ್ವೈ, ಈಗಾಗಲೇ ನನಗೆ 79 ವರ್ಷ ವಯಸ್ಸಾಗಿದೆ. ವಯಸ್ಸಿನ ಕಾರಣದಿಂದಾನೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಎಂದಿದ್ದಾರೆ.

ಇನ್ನು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯವಾಗಿ ಭಾಗಿಯಾಗುತ್ತೇನೆ. ರಾಜ್ಯದ ಉದ್ಧಗಲಕ್ಕೂ ಪ್ರವಾಸ ಮಾಡಿ, ಪಕ್ಷವನ್ನೂ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ಈಗಾಗಲೇ ರಾಘವೇಂದ್ರ ಸಂಸದರಾಗಿದ್ದಾರೆ, ವಿಜಯೇಂದ್ರ ಪಕ್ಷದ ಉಪಾಧ್ಯಕ್ಷರಾಗಿದ್ದಾರೆ. ವಿಜಯೇಂದ್ರ ಇನ್ನೂ ಯುವಕರಿದ್ದಾರೆ. ಹೀಗಾಗಿ ಎಲ್ಲವನ್ನು ಸರಿದೂಗಿಸಿಕೊಂಡು ಹೋಗುತ್ತಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...