Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಪ್ರದೇಶ ಬಿಜೆಪಿ ಪ್ರಣಾಳಿಕೆ ಬಿಡುಗಡೆ ; ಉದ್ಯೋಗ,ಶಿಕ್ಷಣ, ಲವ್ ಜಿಹಾದ್, ಉಚಿತ ವಿದ್ಯುತ್, ಟ್ಯಾಬ್, ಸ್ಕೂಟಿ…!

Facebook
Twitter
Telegram
WhatsApp

ಹೊಸದಿಲ್ಲಿ:  ಉತ್ತರ ಪ್ರದೇಶದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಲೋಕ ಕಲ್ಯಾಣ ಸಂಕಲ್ಪ ಪತ್ರ ಎಂಬ ಪ್ರಣಾಳಿಕೆಯನ್ನು ಪಕ್ಷದ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮಂಗಳವಾರ ಬಿಡುಗಡೆ ಮಾಡಿದರು.

ರೈತರು, ಯುವಕರು ಮತ್ತು ಹೆಣ್ಣು ಮಕ್ಕಳ ಕಲ್ಯಾಣವೇ ಪ್ರಣಾಳಿಕೆಯ ಮುಖ್ಯ ಗುರಿಯಾಗಿದೆ. ರೈತರಿಗೆ ಐದು ವರ್ಷಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಮತ್ತು ಅಕ್ಕಿ,  ಗೋಧಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತು. 15 ದಿನಗಳೊಳಗೆ ಕಬ್ಬಿನ ಬಾಕಿ ಪಾವತಿಗೆ ಕ್ರಮಕೈಗೊಳ್ಳಲಾಗುವುದು ಇಲ್ಲವಾದರೆ ಗಿರಣಿಗಳಿಂದ ಬಡ್ಡಿ ವಸೂಲಿ ಮಾಡುವುದಾಗಿ ಹೇಳಿದೆ.

ಅಯೋಧ್ಯೆಯಲ್ಲಿ ರಾಮಾಯಣ ವಿಶ್ವವಿದ್ಯಾಲಯ ಸ್ಥಾಪನೆ ಮತ್ತು ಮುಂದಿನ ಐದು ವರ್ಷಗಳಲ್ಲಿ ಮೂರು ಕೋಟಿ ಹೊಸ ಉದ್ಯೋಗಗಳ ಸೃಷ್ಟಿ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ರಾಣಿ ಲಕ್ಷ್ಮೀಬಾಯಿ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟಿ ಮತ್ತು ಯುವ ಸಬಲೀಕರಣ ಯೋಜನೆಯಡಿ ಯುವಕರಿಗೆ 2 ಕೋಟಿ ಟ್ಯಾಬ್ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ, ಅಂಗವಿಕಲರಿಗೆ ಮತ್ತು ವೃದ್ಧರಿಗೆ 1,500 ರೂಪಾಯಿ ಪಿಂಚಣಿ, ನಮ್ಮ ಅನ್ನಪೂರ್ಣ ಕ್ಯಾಂಟೀನ್‌ಗಳ ಮೂಲಕ ರಿಯಾಯಿತಿ ಊಟ, ಹೋಳಿ ಮತ್ತು ದೀಪಾವಳಿಗೆ ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಖಾತರಿಪಡಿಸಲಾಗಿದೆ.

ಲವ್ ಜಿಹಾದ್ ಕಾನೂನಿನ ಮೇಲಿನ ನಿಯಮಗಳನ್ನು ಬಿಗಿಗೊಳಿಸಲಾಗುವುದು.  ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಕಾನೂನಿನ ಬದಲಾವಣೆಗಳು ಸ್ಪಷ್ಟವಾಗಿವೆ.

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಹೆಸರಿನಲ್ಲಿ ಕಲಾ ಸಂಸ್ಥೆ ಸ್ಥಾಪಿಸುವುದಾಗಿ ಬಿಜೆಪಿ ಭರವಸೆ ನೀಡಿದೆ. ಫೆ.6ರಂದು ಪ್ರಣಾಳಿಕೆ ಬಿಡುಗಡೆಯಾಗಬೇಕಿದ್ದ ಪ್ರಣಾಳಿಕೆ ಲತಾ ಮಂಗೇಶ್ಕರ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಯುಪಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಫೆಬ್ರವರಿ 10 ರಂದು ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!