Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎತ್ತಿಕಟ್ಟುತ್ತಿರುವ ಬಿಜೆಪಿಯವರದ್ದು ಮನೆ ಮುರುಕ ರಾಜಕೀಯ : ಮೂಡಾ ಹಗರಣ ಆರೋಪಕ್ಕೆ ಸಿದ್ದರಾಮಯ್ಯ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೇನೆ ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಬಾರಿ ಕ್ಲಾರಿಟಿ ನೀಡಿದ್ದಾರೆ. ಈಗ ಮತ್ತೊಮ್ಮೆ ಮೂಡಾ ಹಗರಣದ ಬಗ್ಗೆ ಕ್ಲಾರಿಟಿ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದ್ದು ಮನೆ ಮುರುಕ ರಾಜಕೀಯ. ಮೂಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಎರಡು ಸೇರಿಕೊಂಡು ನನ್ನ ಜೀವಮಾನದಲ್ಲಿಯೇ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ.ಕರ್ನಾಟಕದಲ್ಲಿ ಕುಸಿದು ಹೋಗುತ್ತಿರುವ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಸುಳ್ಳನ್ನು ಸಾವಿರ ಸಲ ಹೇಳಿದರೆ ಅದೇ ನಿಜವಾಗುತ್ತದೆ ಎಂಬ ಹಿಟ್ಲರ್ ವಾದಿ ಹಾಗೂ ಭಾರತದ ಸಂದರ್ಭದಲ್ಲಿ ಪೇಶ್ವೆವಾದಿ ಮನಸ್ಥಿತಿಯನ್ನು ಬಿಜೆಪಿಯವರು ಹೊಂದಿದ್ದಾರೆ. ಅದನ್ನು ನಮ್ಮ ರಾಜ್ಯದಲ್ಲಿ ಪ್ರತಿಪಾದಿಸುತ್ತಿದ್ದಾರೆ. ಈ ಹಿಂದೆ ದೇವರಾಜ್ ಅರಸರ ವಿಚಾರದಲ್ಲೂ ಹಿಂಗೆ ಆಗಿತ್ತು.

ಅಷ್ಟೇ ಯಾಕೆ ಧರ್ಮಸಿಂಗ್ ಅವರ ವಿಚಾರದಲ್ಲೂ ಹೀಗೆ ಆಗಿತ್ತು. ಅದಕ್ಕೂ ಮೊದಲು ಕಲ್ಯಾಣದ ಬಿಜ್ಜಳನನ್ನು ಇದೇ ಪೇಶ್ವೆ ಮನಸ್ಥಿತಿಯ ಜನರೇ ಕೊಲೆ ಮಾಡಿದ್ದರು. ಈಗ ನನ್ನ ವಿಚಾರಕ್ಕೂ ಅದೇ ಆಗುತ್ತಿದೆ. ನನ್ನ ವಿಚಾರಕ್ಕೂ ಬಂದಿದ್ದೀರಿ. ಅಡ್ಡಿ ಇಲ್ಲ ಬನ್ನಿ, ಬಂದಿದ್ದು ಒಳ್ಳೆಯದ್ದೇ ಆಯಿತು. ರಾಜ್ಯದ ಜನರು ಇದನ್ನು ನೋಡುತ್ತಿದ್ದಾರೆ. ದಮನಿತ ವರ್ಗಗಳ ಜನಸಮೂಹದಿಂದ ಬಂದವರು ರಾಜಕಾರಣವನ್ನೇ ಮಾಡಬಾರದೆಂಬ ನಿಲುವು ಇವರದ್ದು ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!