Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎತ್ತಿಕಟ್ಟುತ್ತಿರುವ ಬಿಜೆಪಿಯವರದ್ದು ಮನೆ ಮುರುಕ ರಾಜಕೀಯ : ಮೂಡಾ ಹಗರಣ ಆರೋಪಕ್ಕೆ ಸಿದ್ದರಾಮಯ್ಯ ಆಕ್ರೋಶ

---Advertisement---

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೇನೆ ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಬಾರಿ ಕ್ಲಾರಿಟಿ ನೀಡಿದ್ದಾರೆ. ಈಗ ಮತ್ತೊಮ್ಮೆ ಮೂಡಾ ಹಗರಣದ ಬಗ್ಗೆ ಕ್ಲಾರಿಟಿ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದ್ದು ಮನೆ ಮುರುಕ ರಾಜಕೀಯ. ಮೂಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಎರಡು ಸೇರಿಕೊಂಡು ನನ್ನ ಜೀವಮಾನದಲ್ಲಿಯೇ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ.ಕರ್ನಾಟಕದಲ್ಲಿ ಕುಸಿದು ಹೋಗುತ್ತಿರುವ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಸುಳ್ಳನ್ನು ಸಾವಿರ ಸಲ ಹೇಳಿದರೆ ಅದೇ ನಿಜವಾಗುತ್ತದೆ ಎಂಬ ಹಿಟ್ಲರ್ ವಾದಿ ಹಾಗೂ ಭಾರತದ ಸಂದರ್ಭದಲ್ಲಿ ಪೇಶ್ವೆವಾದಿ ಮನಸ್ಥಿತಿಯನ್ನು ಬಿಜೆಪಿಯವರು ಹೊಂದಿದ್ದಾರೆ. ಅದನ್ನು ನಮ್ಮ ರಾಜ್ಯದಲ್ಲಿ ಪ್ರತಿಪಾದಿಸುತ್ತಿದ್ದಾರೆ. ಈ ಹಿಂದೆ ದೇವರಾಜ್ ಅರಸರ ವಿಚಾರದಲ್ಲೂ ಹಿಂಗೆ ಆಗಿತ್ತು.

ಅಷ್ಟೇ ಯಾಕೆ ಧರ್ಮಸಿಂಗ್ ಅವರ ವಿಚಾರದಲ್ಲೂ ಹೀಗೆ ಆಗಿತ್ತು. ಅದಕ್ಕೂ ಮೊದಲು ಕಲ್ಯಾಣದ ಬಿಜ್ಜಳನನ್ನು ಇದೇ ಪೇಶ್ವೆ ಮನಸ್ಥಿತಿಯ ಜನರೇ ಕೊಲೆ ಮಾಡಿದ್ದರು. ಈಗ ನನ್ನ ವಿಚಾರಕ್ಕೂ ಅದೇ ಆಗುತ್ತಿದೆ. ನನ್ನ ವಿಚಾರಕ್ಕೂ ಬಂದಿದ್ದೀರಿ. ಅಡ್ಡಿ ಇಲ್ಲ ಬನ್ನಿ, ಬಂದಿದ್ದು ಒಳ್ಳೆಯದ್ದೇ ಆಯಿತು. ರಾಜ್ಯದ ಜನರು ಇದನ್ನು ನೋಡುತ್ತಿದ್ದಾರೆ. ದಮನಿತ ವರ್ಗಗಳ ಜನಸಮೂಹದಿಂದ ಬಂದವರು ರಾಜಕಾರಣವನ್ನೇ ಮಾಡಬಾರದೆಂಬ ನಿಲುವು ಇವರದ್ದು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment