Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಲೆ ಗುಂಪಾಗಿರುವ ತುಳು, ಕೊಡವ ಭಾಷೆ ಮೇಲೂ ಪ್ರೀತಿ ತೋರಿಸಿ : ಬಿಜೆಪಿಗರಿಗೆ ಹರಿಪ್ರಸಾದ್ ಚಾಟಿ..!

Facebook
Twitter
Telegram
WhatsApp

ಬೆಂಗಳೂರು: ಸಂಸ್ಕೃತ ಭಾಷೆಯ ವಿಚಾರವಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಸೋಷಿಯಲ್ ಮೀಡಿಯಾದಲ್ಲೂ ಪರ ವಿರೋಧ ಚರ್ಚೆಗಳು ಜೋರಾಗಿವೆ. ಈ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಬಿಜೆಪಿಗೆ ಚಾಟಿ ಬೀಸಿದ್ದಾರೆ.

ಬಿಜೆಪಿ ಸರ್ಕಾರ ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಪ್ರೀತಿಯನ್ನು ಮೂಲೆ ಗುಂಪಾಗಿರುವ ತುಳ ಮತ್ತು ಕೊಡವ ಭಾಷೆ ಮೇಲೂ ತೋರಿಸಲಿ ಎಂದು ಆಗ್ರಹಿಸಿದ್ದಾರೆ. ತುಳು ಮತ್ತು ಕೊಡವ ಸಂಖ್ಯೆಗಿಂತ ಸಂಸ್ಕೃತ ಮಾತೃ ಭಾಷೆಯೆಂದು ದಾಖಲಿಸಿರುವವರ ಸಂಖ್ಯೆ ತೀರಾ ಅಂದ್ರೆ ತೀರಾ ಕಡಿಮೆ ಇದೆ. ಇಷ್ಟು ಕಡಿಮೆ ಸಂಖ್ಯೆ ಇರುವವರ ಮೇಲೆ ಬಿಜೆಪಿ ಸರ್ಕಾರ ತನ್ನ ಅಗಾಧ ಪ್ರೀತಿಯನ್ನ ತೋರಿಸುತ್ತಾ ಬಂದಿದೆ.

ಹಾಗೆ ನೋಡಿದ್ರೆ ನಮ್ಮ ರಾಜ್ಯದಲ್ಲಿ ಈಗಾಗಲೇ ಇರುವ ಸಂಸ್ಕೃತ ವಿವಿಗೆ ಬೇಕಾದಂತ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ಆದ್ರೆ ಕೊಡವ ಮತ್ತು ತುಳು ಭಾಷೆಯತ್ತ ದಿವ್ಯ ನಿರ್ಲಕ್ಷ್ಯ ತೋರಿಸಲಾಗಿದೆ. ದೇಶದಲ್ಲಿ ಹಲವಾರು ರಾಜ್ಯಗಳು ಒಂದಕ್ಕಿಂತ ಹೆಚ್ಚು ಭಾಷೆಯನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದ್ರೆ ಕರ್ನಾಟಕ ರಾಜ್ಯ ಕನ್ನಡ ಒಂದಕ್ಕೆ ಬಿಟ್ಟು ಬೇರೆ ಯಾವುದಕ್ಕೂ ಅಧಿಕೃತ ಸ್ಥಾನ ನೀಡಿಲ್ಲ. ಸಾಕಷ್ಟು ಜನ ಪ್ರತಿದಿನ ಉಪಯೋಗಿಸಿವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರ್ಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!