Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಹಾರದಂತೆ ಕರ್ನಾಟಕದಲ್ಲೂ ಜಾತಿಗಣತಿ ನಡೆಸಲು ಬಿಕೆ ಹರಿಪ್ರಸಾದ್ ಒತ್ತಾಯ

Facebook
Twitter
Telegram
WhatsApp

 

ಬೆಂಗಳೂರು: ಬಿಹಾರದಲ್ಲಿ ಸಿಎಂ ನಿತಿನ್ ಕುಮಾರ್ ಜಾತಿ ಗಣತಿಯನ್ನು ನಡೆಸಿ ವರದಿಯನ್ನು ಬಹಿರಂಗಪಡಿಸಿದ್ದಾರೆ. ಜಾತಿಗಣತಿ ಬರದಿ ಬಿಡುಗಡೆ ಮಾಡಿದ್ದಕ್ಕೆ ಬಿಹಾರದ ಸರ್ಕಾರವನ್ನು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಶ್ಲಾಘಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಜಾತಿ ಗಣತಿ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ಇಂಡಿಯಾ”ಮೈತ್ರಿ ಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರ್ಕಾರದ ಐತಿಹಾಸಿಕ ನಡೆ ಅಭಿನಂದನೀಯ. ಹಿಂದುಳಿದ,ಶೋಷಿತವೂ ಸೇರಿದಂತೆ ಎಲ್ಲಾ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ.

ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕರಾದ ಶ್ರೀ @RahulGandhi ಅವರು ಧ್ವನಿ ಎತ್ತಿದ್ದಾರೆ. ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನ ಬಹಿರಂಗ ಪಡಿಸುವ ದಿಟ್ಟತನ ತೋರಬೇಕಿದೆ ಎಂದಿದ್ದಾರೆ.

ಬಿಹಾರದಲ್ಲಿ ಸಿಎಂ ನಿತಿನ್ ಹಲವು ತಿಂಗಳುಗಳ ಹಿಂದೆಯೇ ರಾಜ್ಯದಲ್ಲಿ ಜಾತಿ ಗಣತಿ ವಿಚಾರವಾಗಿ ಸಮೀಕ್ಷೆ ಕೈಗೊಂಡಿದ್ದರು. ಇದಕ್ಕೆ ಬಿಜೆಪಿ ವಿರೋಧ ಕೂಡ ವ್ಯಕ್ತಪಡಿಸಿತ್ತು. ಆದರೆ ಇದೀಗ ಜಾತಿ ಸಮೀಕ್ಷೆ ಹೊರ ಬಂದ ಬಳಿಕ ಸಿಎಂ ನಿತೀಶ್ ಕುಮಾರ್, ಎಲ್ಲಾ ರಾಜ್ಯದ ರಾಜಕೀಯ ಪಕ್ಷಗಳನ್ನು ಸಭೆಗೆ ಕರೆದಿದ್ದಾರೆ. ಜಾತಿಗಣತಿಯ ಆಧಾರದ ಮೇಲೆ ಸೌಲಭ್ಯ ಹಂಚಿಕೆ ಮಾಡುವುದಕ್ಕೂ ಇದು ನೆರವಾಗುತ್ತದೆ ಎಂಬ ಕಾರಣಕ್ಕೇನೆ ಜಾತಿಗಣತಿ ಮಾಡಿ ಎಂದು ಬೇಡಿಕೆ ಹೆಚ್ಚಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!