Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಣರಣ ಬಿಸಿಲು… ಜನರಿಗೆ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ ; ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ..?

---Advertisement---

ಬೆಂಗಳೂರು; ಮನೆಯಿಂದ ಹೊರ ಬರುವುದಕ್ಕೂ ಮುನ್ನವೇ ಜನ ಚಿಂತೆ ಮಾಡುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಅದರಲ್ಲೂ ಬಿಸಿಲಿನ ಬೇಗೆ ಹೆಚ್ಚಾಗಿದೆ. ಈ ರಣಬಿಸಿಲಿನ ತಾಪಕ್ಕೆ ಸಾಮಾನ್ಯವಾಗಿ ಕಾಯಿಲೆಗಳು ಬೀಳುವ ಸಾಧ್ಯತೆ ಇದೆ. ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ಬಿಸಿಲು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅದರಿಂದ ಪಾರಾಗುವುದಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.

ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕಾರಾವಾರ ಹಾಗೂ ಕರಾವಳಿ ಭಾಗದಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್ ವರೆಗೂ ಗರಿಷ್ಠ ಉಷ್ಣಾಂಶ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಾರ್ಚ್ ತಿಂಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಸಾಧ್ಯತೆ ಇರುತ್ತದೆ. ಹೀಗಾಗಿ ಆರೋಗ್ಯ ಇಲಾಖೆ ಗೈಡ್ ಲೈನ್ಸ್ ಹೊರಡಿಸಿದ್ದು, ಹೆಚ್ಚು ನೀರು ಕುಡಿಯುವುದು, ಪ್ರಯಾಣ ಮಾಡುವ ಸಮಯದಲ್ಲೂ ನೀರನ್ನು ಹೆಚ್ಚಾಗಿ ಕುಡಿಯುವುದು.

ನಿಂಬೆ ಹಣ್ಣಿನ ಜ್ಯೂಸ್ ಅಥವಾ ಲಸ್ಸಿ, ಮಜ್ಜಿಗೆ ಅಂಶವನ್ನ ಸೇವಿಸುವುದು, ನೀರಿನ ಅಂಶ ಹೊಂದಿರುವ ಹಣ್ಣು, ತರಕಾರಿ ಸೇವಿಸುವುದು, ತಿಳಿ ಬಣ್ಣದ ಅಥವಾ ಹತ್ತು ಬಟ್ಟೆಯನ್ನ ಧರಿಸುವುದು, ಹೊರ ಹೋಗುವಾಗ ಛತ್ರಿ, ಟೋಪಿಯಂತಹ ಏನಾದರೂ ಸರಿ ನೆತ್ತಿಗೆ ಬಿಸಿಲು ಬೀಳದಂತೆ ನೋಡಿಕೊಳ್ಳುವುದು, ಉತ್ತಮ ಗಾಳಿ ಬೀಸುವಂತಹ ಜಾಗದಲ್ಲಿ ಇರುವುದು ಉತ್ತಮ. ಹೀಗೆ ಹಲವು ಸುರಕ್ಷತಾ ಕ್ರಮಗಳನ್ನ ತೆಗೆದುಕೊಂಡು, ಬಿಸಿಲಿನಿಂದ ರಕ್ಷಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment