ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ತಾಲ್ಲೂಕಿನ ಭೀಮಸಮುದ್ರ ತುರೈಭೈಲು-2 ಗ್ರಾಮದ ಜನತಾ ಕಾಲೋನಿಯಲ್ಲಿ ಸ್ನೇಹ ಜೀವಿ ಗೆಳೆಯರ ಬಳಗದ ವತಿಯಿಂದ ಇದೇ ಸೆ.05ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಗೌರಿ-ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸೆ.05ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸ್ನೇಹ ಜೀವಿ ಗೆಳೆಯರ ಬಳಗ ಪ್ರಕಟಣೆ ತಿಳಿಸಿದೆ.














