Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಪತ್ತೆಯಾಗಿರುವ ಮಾಜಿ ಸಚಿವ ಸಿಪಿ ಯೋಗೀಶ್ವರ್ ಬಾವನ ಕಾರಿನಲ್ಲಿ ರಕ್ತದ ಕಲೆಗಳು ಪತ್ತೆ..!

---Advertisement---

ರಾಮನಗರ: ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಸಿಪಿ ಯೋಗೀಶ್ವರ್ ಅವರ ಬಾವ ನಾಪತ್ತೆಯಾಗಿದ್ದಾರೆ‌. ಈ ಕೇಸ್ ಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿವೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಕಾರು ಪತ್ತೆಯಾಗಿದೆ.

ಸಿಪಿ ಯೋಗೀಶ್ವರ್ ಬಾವ ಅವರ ಕಾರು ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಬಳಿ, ಕಳೆದ ಎರಡು ದಿನಗಳಿಂದ ನಿಂತಿದೆ. ಈ ಕಾರಿನ ಬಳಿ ಈಗಾಗಲೇ ಪೊಲೀಸರು, ಚನ್ನಪಟ್ಟಣ ಡಿವೈಎಸ್ಪಿ ಹಾಗೂ ಮಾಜಿ ಸಚಿವ ಸಿಪಿ ಯೋಗೀಶ್ವರ್ ಭೇಟಿ ನೀಡಿದ್ದಾರೆ. ಈ ವೇಳೆ ಕಾರಿನ ಡಿಕ್ಕಿ ಓಪನ್ ಮಾಡಿದಾಗ ಅದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ.

ಇದನ್ನು ಕಂಡು ಪೊಲೀಸರು ತಕ್ಷಣ ಅಲ್ಲಿಯೇ ಇದ್ದ ಸಿಸಿಟಿವಿ ಪರೀಕ್ಷೆ ಮಾಡಿದ್ದಾರೆ. ಜೊತೆಗೆ ಎಫ್ಎಸ್ಎಲ್ ತಂಡ, ಫಿಂಗರ್ ಪ್ರಿಂಟ್ಸ್ ತಂಡ, ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿದ್ದಾರೆ. ಎಲ್ಲಾ ರೀತಿಯಾದಂತ ಪರೀಕ್ಷೆಯನ್ನು ಮಾಡಿಸುತ್ತಿದ್ದಾರೆ. ಸಿಪಿ ಯೋಗೀಶ್ವರ್ ಅವರ ಬಾವ ಮಹದೇವಯ್ಯ ಡಿಸೆಂಬರ್ 2ರಂದು ನಾಪತ್ತೆಯಾಗಿದ್ದರು. ಬಳಿಕ ಪೊಲೀಸರು ತಂಡಗಳನ್ನು ರಚನೆ ಮಾಡಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕತಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment