Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಚಾರಿ ನಿಯಮ ಉಲ್ಲಂಘನೆ : BMTC, KSRTC ಚಾಲಕನ ತಲೆಗೆ ಬಿತ್ತು ಕೋಟಿ ದಂಡ..!

Facebook
Twitter
Telegram
WhatsApp

ಬೆಂಗಳೂರು: ಸರ್ಕಾರಿ ಅಧೀನದಲ್ಲಿರುವ ಬಸ್ ಅಂತ ಏನೋ ಅಂದ್ಕೊಂಡು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಡ್ರೈವರ್ಸ್ ಸಂಚಾರಿ ನಿಯಮವನ್ನ ಉಲ್ಲಂಘನೆ ಮಾಡಿದ್ರು ಅನ್ಸುತ್ತೆ. ಇದೀಗ ಅದಕ್ಕೆ ಸರಿಯಾಗಿಯೇ ದಂಡ ಬಿದ್ದಿದೆ.

ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ಸಂಚಾರ ನಿಯಮ ಉಲ್ಲಂಘಿಸಿದ ಪರಿಣಾಮ ವರ್ಷವೊಂದರಲ್ಲಿಯೇ ಬಾಕಿ ಇರುವ ಒಂದು ಕೋಟಿಗೂ ಅಧಿಕ ದಂಡವನ್ನ ಪಾವತಿಸುವಂತೆ ಸಂಚಾರಿ ಪೊಲೀಸರು ನೋಟೀಸ್ ನೀಡಿದ್ದಾರೆ. ಡಿಪೋಗೂ ಸೇರಿದಂತೆ ಚಾಲಕರಿಗೂ ನೋಟೀಸ್ ನೀಡಿದ್ದಾರೆ. ಇದು ಚಾಲಕ ಹಾಗೂ ಕಂಡಕ್ಟರ್ ಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

ಅತಿ ವೇಗದ ಚಾಲನೆ, ನೋ ಪಾರ್ಕಿಂಗ್, ಸಿಗ್ನಲ್ ಜಂಪ್ ಸೇರಿದಂತೆ ಹಲವು ನಿಯಮಗಳನ್ನ ಉಲ್ಲಂಘಿಸಿದ್ದಾರೆ. ಬಸ್ ಗಳ ನಂಬರ್ ಉಲ್ಲೇಖಿಸಿಯೇ ನೋಟೀಸ್ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ 35,048 ಸಂಚಾರಿ ನಿಯಮ ಉಲ್ಲಂಘನೆ ಕೇಸ್ ಗಳು ದಾಖಲಾಗಿವೆ.

ಇದೀಗ ಈ ದಂಡದ ಮೊತ್ತವನ್ನ ಚಾಲಕರೇ ಪಾವತಿಸಬೇಕೆಂದು ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ ಎನ್ನಲಾಗಿದೆ. ಕಟ್ಟದೆ ಇದ್ದಲ್ಲಿ ಅವರ ಸಂಬಳದಲ್ಲಿ ಕಡಿತಗೊಳಿಸುವುದಾಗಿ ವ್ಯವಸ್ಥಾಪಕರು ಹೇಳುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಸಹಜವಾಗಿಯೇ ಚಾಲಕರು ಕಂಗಲಾಗಿದ್ದಾರೆ. ಮೊದಲೇ ಕೊರೊನಾದಿಂದ ತತ್ತರಿಸಿದ್ದ ಸಾರಿಗೆ ಇಲಾಖೆ ಇನ್ನು ಸಂಪೂರ್ಣವಾಗಿ ವೇತನ ನೀಡುತ್ತಿಲ್ಲ. ಹೀಗಿರುವಾಗ ಅಷ್ಟು ದೊಡ್ಡ ಮೊತ್ತ ಪಾವತಿ ಮಾಡೋದು ಹೇಗೆ ಅನ್ನೋದು ಚಾಲಕರ ಪ್ರಶ್ನೆ. ಆದ್ರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದು ಅವರದ್ದೇ ತಪ್ಪು, ಹೀಗಾಗಿ ಚಾಲಕರೇ ದಂಡ ಪಾವತಿಸಬೇಕೆಂಬುದು ಡಿಪೋ ವಾದವಾಗಿದೆ. ಒಟ್ಟಾರೆ ಒಂದು ಕೋಟಿಗೂ ಅಧಿಕ ಮೊತ್ತವನ್ನ ಹೇಗೆ ಪಾವತಿ ಮಾಡ್ತಾರೆ ಅನ್ನೋದೆ ಪ್ರಶ್ನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!