ಬಿ.ಎನ್.ಚಂದ್ರಪ್ಪ ಸೋಲು ಅನಿರೀಕ್ಷಿತ : ಮಾಜಿ ಸಚಿವ ಎಚ್.ಆಂಜನೇಯ

1 Min Read

ಸುದ್ದಿಒನ್,  ಚಿತ್ರದುರ್ಗ,  ಜೂ.4 :ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ.ಆದರೆ, ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಸೋಲು ಅನಿರೀಕ್ಷಿತ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಆಂಜನೇಯ,  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅನ್ಯ ಪಕ್ಷದವರೂ  ಮೆಚ್ಚುವಂತಹ  ಗುಣ ಸ್ವಭಾವ ಹೊಂದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪರಾಭವಗೊಳ್ಳುವ ನಿರೀಕ್ಷೆ ಇರಲಿಲ್ಲ.

ಎಲ್ಲ ಮತ ಕ್ಷೇತ್ರದಲ್ಲಿ ಸಂಪೂರ್ಣ ಗೆಲ್ಲುವ ವಾತಾವರಣವಿತ್ತು. ಜಿಲ್ಲಾ ಸಚಿವರು ಸೇರಿದಂತೆ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು  ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದರು. ಆದರೂ ಪರಾಭವಗೊಂಡಿದ್ದೇವೆ. ಅನಿರೀಕ್ಷಿತ  ಸೋಲಿನಿಂದ ಮುಖಂಡರಿಗೆ, ಕಾರ್ಯಕರ್ತರಿಗೆ  ನೋವಾಗಿರುವುದು ಸಹಜ. ಯಾರೂ ಎದೆಗುಂದುವ  ಅವಶ್ಯಕತೆ ಇಲ್ಲ. ಸುಮಾರು 6 ಲಕ್ಷಕ್ಕೂ ಅಧಿಕ ಮತಗಳನ್ನು ಬಿ.ಎನ್.ಚಂದ್ರಪ್ಪನವರಿಗೆ ಮತಚಲಾವಣೆ ಆಗಿವೆ. ಇಷ್ಟೊಂದು ಮತನೀಡಿದ ಮತದಾರರೆಲ್ಲರಿಗೂ ಎಚ್.ಆಂಜನೇಯ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *