Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಡಿಗಾರ್ಡ್ ನಿರ್ದೇಶಕ ಸಿದ್ಧಿಕ್ ಗೆ ಹೃದಯಾಘಾತ..!

---Advertisement---

 

 

ಇತ್ತಿಚಿನ ದಿನಗಳಲ್ಲಿ ಹೃದಯಾಘಾತ ಅನ್ನೋದು ಹೆಚ್ಚಾಗಿ ಕಾಡುತ್ತಿದೆ. ಇದೀಗ ಮಲಯಾಳಂ ನಿರ್ದೇಶಕ ಸಿದ್ಧಿಕ್ ಇಸ್ಮಾಯಲ್ ಗೂ ಹೃದಯಾಘಾತ ಸಂಭವಿಸಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಕೊಚ್ಚಿಯ ಅಮೃತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಸಿದ್ಧಿಕ್ ಅವರಿಗೆ ಈ ಮೊದಲೇ ನ್ಯುಮೋನಿಯಾ ಸಮಸ್ಯೆ ಕೂಡ ಕಾಡುತ್ತಿತ್ತು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಹಾರ್ಟ್ ಅಟ್ಯಾಕ್ ಕೂಡ ಆಗಿದೆ. ಹಾರ್ಟ್ ಅಟ್ಯಾಕ್ ಆದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕ್ಸಿಜನ್ ಪೂರೈಕೆ ಮೂಲಕ ಅವರಿಗೆ ಚಿಕಿತ್ಸ ನೀಡಲಾಗುತ್ತಿದೆ.

ಸಿನಿಮಾ ರಂಗದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದರು. 1986ರಲ್ಲಿ ಮೊದಲ ಬಾರಿಗೆ ಪಪ್ಪನ್ ಪ್ರಿಯಪ್ಪೆಟ್ಟ ಪಪ್ಪನ್ ಎನ್ನುವ ಕಥೆ ಬರೆದು ಮೂವಿ ಮಾಡಿ ಹಿಟ್​ ಪಡೆದುಕೊಂಡರು. 1992ರಲ್ಲಿ ವಿಯೆಟ್ನಾಂ ಕಾಲೋನಿ ಸಿನಿಮಾ ಮಾಡಿದರು. 2011ರಲ್ಲಿ ಬಾಲಿವುಡ್ ಸ್ಟಾರ್​ ಸಲ್ಮಾನ್​ ಖಾನ್​ ಜೊತೆ ಬಾಡಿಗಾರ್ಡ್​ ಮೂವಿ ಮಾಡಿ ಸಕ್ಸಸ್​ ಪಡೆದುಕೊಂಡರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...