Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ ಬಾಲಿವುಡ್ ಗಾಯಕ..!

---Advertisement---

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಆಗಾಗ ಚಾಲ್ತಿಗೆ ಬರುತ್ತಲೆ ಇರುತ್ತದೆ. ಇದೀಗ ಬಾಲಿವುಡ್ ಗಾಯಕರೊಬ್ಬರು ರೋಹಿಣಿ ಸಿಂಧೂರಿ ಮೇಲೆ ಜಮೀನು ಒತ್ತುವರಿಯ ಆರೋಪ ಮಾಡಿದ್ದಾರೆ.

ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿರುವವರು. ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನು ಟ್ರಸ್ಟ್ ಒಂದಕ್ಕೆ ಸೇರಿದೆ. ಆ ಜಮೀನನ್ನು ರೋಹಿಣಿ ಸಿಂಧೂರ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಅಲ್ಲದೆ ಕರ್ನಾಟಕ ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ. ದೂರಿನ ಕಾಪಿಯ ಜೊತೆಗೆ ಒತ್ತುವರಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಕರ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿ ಅವರು ಸಹಕಾರ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಮೂಲಕ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

 

ಈ ಸಂಬಂಧ ಅಲಿ ದೂರು ಸಲ್ಲಿಸಿರುವುದು ಇದೇ ಮೊದಲೇನು ಅಲ್ಲ. ಈ ಹಿಂದೆಯೂ ದೂರು ಸಲ್ಲಿಕೆ ಮಾಡಿದ್ದರು. 2022ರಲ್ಲೂ ಇದೇ ವಿಚಾರಕ್ಕೆ ದೂರು ನೀಡಿದ್ದರು. ಇದೀಗ ಮತ್ತೆ ಅದೇ ಆರೋಪ ಮಾಡಿದ್ದು, ಟ್ವಿಟ್ಟರ್ ನಲ್ಲಿ ನ್ಯೂ ಯಲಹಂಕ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ಜೊತೆಗೆ ರೋಹಿಣಿ ಸಿಂಧೂರಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿರುವ ಅಲಿ, ದೂರಿನ ಪ್ರತಿಯನ್ನು ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...