ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಆಗಾಗ ಚಾಲ್ತಿಗೆ ಬರುತ್ತಲೆ ಇರುತ್ತದೆ. ಇದೀಗ ಬಾಲಿವುಡ್ ಗಾಯಕರೊಬ್ಬರು ರೋಹಿಣಿ ಸಿಂಧೂರಿ ಮೇಲೆ ಜಮೀನು ಒತ್ತುವರಿಯ ಆರೋಪ ಮಾಡಿದ್ದಾರೆ.
ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿರುವವರು. ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನು ಟ್ರಸ್ಟ್ ಒಂದಕ್ಕೆ ಸೇರಿದೆ. ಆ ಜಮೀನನ್ನು ರೋಹಿಣಿ ಸಿಂಧೂರ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಅಲ್ಲದೆ ಕರ್ನಾಟಕ ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ. ದೂರಿನ ಕಾಪಿಯ ಜೊತೆಗೆ ಒತ್ತುವರಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಕರ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿ ಅವರು ಸಹಕಾರ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಮೂಲಕ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

ಈ ಸಂಬಂಧ ಅಲಿ ದೂರು ಸಲ್ಲಿಸಿರುವುದು ಇದೇ ಮೊದಲೇನು ಅಲ್ಲ. ಈ ಹಿಂದೆಯೂ ದೂರು ಸಲ್ಲಿಕೆ ಮಾಡಿದ್ದರು. 2022ರಲ್ಲೂ ಇದೇ ವಿಚಾರಕ್ಕೆ ದೂರು ನೀಡಿದ್ದರು. ಇದೀಗ ಮತ್ತೆ ಅದೇ ಆರೋಪ ಮಾಡಿದ್ದು, ಟ್ವಿಟ್ಟರ್ ನಲ್ಲಿ ನ್ಯೂ ಯಲಹಂಕ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ಜೊತೆಗೆ ರೋಹಿಣಿ ಸಿಂಧೂರಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿರುವ ಅಲಿ, ದೂರಿನ ಪ್ರತಿಯನ್ನು ಹಾಕಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











