Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ : ಪೊಲೀಸರಿಂದ ಶೋಧ

Facebook
Twitter
Telegram
WhatsApp

 

ಸುದ್ದಿಒನ್, ಬೆಂಗಳೂರು, ಡಿಸೆಂಬರ್.01. : ಇಂದು ನಗರದ 15 ಶಾಲೆಗಳಿಗೆ ಅಪರಿಚಿತ ವ್ಯಕ್ತಿಗಳು ಇ ಮೇಲ್ ಮಾಡಿ ಕಟ್ಟಡಗಳನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಇದರಿಂದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸ್ಥಳಾಂತರಿಸಿ ಮನೆಗೆ ಕಳುಹಿಸಲಾಗಿದೆ. ಬಳಿಕ ಆಯಾ ಶಾಲೆಗಳಲ್ಲಿ ಕೂಲಂಕುಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಆದರೆ, ಇದು ದುಷ್ಕರ್ಮಿಗಳ ಕೃತ್ಯ ಎಂದು ಪೊಲೀಸರು ಶಂಕಿಸಿದ್ದಾರೆ.

ಮೊದಲಿಗೆ ಬಸವೇಶ್ವರನಗರದ ವಿದ್ಯಾಶಿಲ್ಪಾ ಶಿಕ್ಷಣ ಸಂಸ್ಥೆ ಸೇರಿದಂತೆ ಏಳು ಶಾಲೆಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಮೇಲ್ ಕಳುಹಿಸಿದ್ದರು. ಇವುಗಳಲ್ಲಿ ಒಂದು ಶಾಲೆಯು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಎದುರು ಇದೆ. ಕೆಲವೇ ಸಮಯದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಇ-ಮೇಲ್ ಮೂಲಕ ಇದೇ ರೀತಿಯ ಬೆದರಿಕೆಗಳು ಬಂದಿವೆ. ಈ  ಮಾಹಿತಿ ಪಡೆದ ಬೆಂಗಳೂರು ಪೊಲೀಸರು ಭದ್ರತಾ ಕ್ರಮಗಳ ಭಾಗವಾಗಿ ಶಾಲೆಗಳಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತೆರವುಗೊಳಿಸಿದರು.

ಬಾಂಬ್ ಬೆದರಿಕೆ ಹುಸಿ ಎಂಬ ಸೂಚನೆಗಳಿದ್ದರೂ ಪೊಲೀಸರು ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ತೀವ್ರ ಶೋಧ ನಡೆಸುತ್ತಿದ್ದಾರೆ. ಯಾವುದೇ ಶಾಲೆಯಲ್ಲಿ ಬಾಂಬ್ ಇರುವುದನ್ನು ಅವರು ಇನ್ನೂ ಖಚಿತಪಡಿಸಿಲ್ಲ. ಕಳೆದ ವರ್ಷ ಬೆಂಗಳೂರಿನ ಹಲವು ಶಾಲೆಗಳಿಗೆ ಇದೇ ರೀತಿಯ ಇ-ಮೇಲ್ ಬೆದರಿಕೆಗಳು ಬಂದಿದ್ದವು. ಆದರೆ ಅದು ನಕಲಿ ಎಂದು ತಿಳಿದುಬಂದಿದೆ.

ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ದಯಾನಂದ್ ಮಾತನಾಡಿ, ಹಲವು ಬಾಂಬ್ ನಿಷ್ಕ್ರಿಯ ತಂಡಗಳು ಶಾಲಾ ಆವರಣದಲ್ಲಿ ತಪಾಸಣೆ ನಡೆಸುತ್ತಿವೆ. ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಇದು ಹುಸಿ ಮೇಲ್ ಎಂದು ತೋರುತ್ತಿದೆ. ಶೀಘ್ರವೇ ಶೋಧ ಕಾರ್ಯಾಚರಣೆಯನ್ನು ಪೂರ್ಣಗೊಳಿಸುತ್ತೇವೆ. ಆದರೆ, ಪೋಷಕರು ಗಾಬರಿಯಾಗದಂತೆ ವಿನಂತಿಸುತ್ತೇವೆ ಎಂದರು. ಕಳೆದ ವರ್ಷವೂ ನಗರದ ಹಲವು ಶಾಲೆಗಳಿಗೆ ದುಷ್ಕರ್ಮಿಗಳು ಇದೇ ರೀತಿಯ ಇಮೇಲ್ ಕಳುಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!