Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲೆಗಳಿಗೆ ಬಾಂಬ್ ಬೆದರಿಕೆ : ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಸಾರ್ವಜನಿಕ ಆಕ್ರೋಶ..!

---Advertisement---

 

ಬೆಂಗಳೂರು: ಇಂದು ಸಿಲಿಕಾನ್ ಸಿಟಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆಯ ಕರೆ ಬಂದಿತ್ತು. ಇದರಿಂದ ಪೋಷಕರು ನಿಜಕ್ಕೂ ಗಾಬರಿಯಾಗಿದ್ದಾರೆ. ಆದರೆ ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೊಟ್ಟ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮಧು ಬಂಗಾರಪ್ಪ ಅವರನ್ನು ಫುಲ್ ಟ್ರೋಲ್ ಮಾಡ್ತಾ ಇದ್ದಾರೆ. ಅಷ್ಟೆ ಅಲ್ಲ ಸಾಮಾಜಿಕ ಜಾಲತಾಣದಲ್ಲೂ ಫುಲ್ ವೈರಲ್ ಆಗ್ತಾ ಇದೆ. ಹಾಗಾದ್ರೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ?

ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಸಹಜವಾಗಿಯೇ ಪೋಷಕರಿಗೆ ಆತಂಕ ಸೃಷ್ಟಿಯಾಗಿದೆ. ಆದರೆ ಶಿಕ್ಷಣ ಸಚಿವರೇ ಹಾರಿಕೆ ಉತ್ತರವನ್ನು ನೀಡಿದ್ದಾರೆ. ಇವೆಲ್ಲ ಹೋಕ್ಸ್ ಅಂದ್ರೆ ಹುಸಿ ಕರೆ ಎಂದು ಸಚಿವರು ಹೇಳಿದ್ದಾರೆ. ನಾನು ಬಂದಾಗಲೂ ಇತ್ತು. ಇದೆಲ್ಲ ಮಾತನಾಡುವುದು ತಪ್ಪು. ನೀವೂ ಕೇಳುವುದು ತಪ್ಪು. 40 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಗ್ಗೆ ನನಗೆ ಗೊತ್ತಿಲ್ಲ. ಏನು ಇಲ್ಲ. ಕಾನೂನು ಇದೆ. ಕಾನೂನು ನೋಡಿಕೊಳ್ಳುತ್ತದೆ. ಅದೆಲ್ಲ ಬಿಡಿ. ಬೇರೆ ಪಾಠ – ಗೀಠದ್ದು ಇದ್ದರೆ ಹೇಳಿ ಎಂದಿದ್ದಾರೆ.

ಆದರೆ ಈ ರೀತಿಯಾದ ಹೇಳಿಕೆಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ರೋಶ ವ್ಯಕ್ತವಾಗಿದ್ದು, ಟ್ರೋಲ್ ಮಾಡ್ತಾ ಇದ್ದಾರೆ. ಮಕ್ಕಳಿಗೆ, ಪೋಷಕರಿಗೆ ಸಮಾಧಾನ ಹೇಳಬೇಕಾದ ಹುದ್ದೆಯಲ್ಲಿರುವವರೇ ಈ ರೀತಿಯಾದ ಉತ್ತರ ಹೇಳುವುದು ಎಷ್ಟು ಸರಿ. ಅನಾಹುತಗಳು ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment