Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಾಲಗಾರರು ನಿಗಧಿತ ಸಮಯಕ್ಕೆ ಅಸಲು ಮತ್ತು ಬಡ್ಡಿ ಪಾವತಿಸಿ, ಸಂಘದ ಏಳಿಗೆಗೆ ಸಹಕರಿಸಿ : ಅಧ್ಯಕ್ಷ ಹೆಚ್.ಜಲೀಲ್‍ಸಾಬ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಸದಸ್ಯರ ಸಹಕಾರದಿಂದ ವಿಶ್ವಮಾನವ ಅಲ್ಪಸಂಖ್ಯಾತರ ಪತ್ತಿನ ಸಹಕಾರ ಸಂಘ ಅಭಿವೃದ್ದಿಯತ್ತ ಮುನ್ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಲಾಭಾಂಶ ಕಾಣಬಹುದು ಎಂದು ಸಂಘದ ಅಧ್ಯಕ್ಷ ಹೆಚ್.ಜಲೀಲ್‍ಸಾಬ್ ತಿಳಿಸಿದರು.

ಎ.ಪಿ.ಎಂ.ಸಿ. ಆವರಣದಲ್ಲಿರುವ ಐ.ಎ.ಟಿ. ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ವಿಶ್ವಮಾನವ ಅಲ್ಪಸಂಖ್ಯಾತರ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

589 ಸದಸ್ಯರುಗಳಿದ್ದು, ಏಳು ಲಕ್ಷ 95 ಸಾವಿರ ರೂ. ಷೇರು ಬಂಡವಾಳವಿದೆ. 22 ಮಂದಿ ಸದಸ್ಯತ್ವ ಪಡೆದುಕೊಂಡಿದ್ದಾರೆ. 4 ಲಕ್ಷ 51 ಸಾವಿರದ 250 ರೂ. ಠೇವಣಿಯಿದ್ದು, 7.5 ಲಕ್ಷ ರೂ.ಗಳ ಸಾಲ ನೀಡಲಾಗಿದೆ. ಸಾಲಗಾರರು ನಿಗಧಿತ ಸಮಯಕ್ಕೆ ಸರಿಯಾಗಿ ಅಸಲು ಮತ್ತು ಬಡ್ಡಿಯನ್ನು ಪಾವತಿಸಿ ಸಂಘದ ಏಳಿಗೆಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಸಾಲಗಾರರಷ್ಟೆ ಜಾಮೀನುದಾರರ ಮೇಲೆ ಜವಾಬ್ದಾರಿಯಿದೆ ಎನ್ನುವುದನ್ನು ಮರೆಯಬಾರದು. ಸಣ್ಣ ಪ್ರಮಾಣದ ನಿರೀಕ್ಷೆ ಮುಟ್ಟಿದರೆ ಸಮಾಜಕ್ಕೆ ಉಪಯುಕ್ತವಾದ ಸಹಾಯ ಮಾಡಲು ಆಗುತ್ತದೆ. ವಿಶ್ವಮಾನವ ಅಲ್ಪಸಂಖ್ಯಾತರ ಪತ್ತಿನ ಸಹಕಾರ ಸಂಘಕ್ಕೆ ಶಕ್ತಿ ಬರಬೇಕಾದರೆ ಠೇವಣಿ, ಷೇರುದಾರರು ಜಾಸ್ತಿಯಾಗಬೇಕು. ಠೇವಣಿ ಹಣಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ನಿಭಾಯಿಸುತ್ತೇವೆ. ಅನುಮಾನ ಪಡುವುದು ಬೇಡ. ಚಳ್ಳಕೆರೆ, ಹಿರಿಯೂರು, ಚಿಕ್ಕಜಾಜೂರಿನಲ್ಲಿ ಶಾಖೆ ತೆರೆಯಬೇಕೆಂದುಕೊಂಡಿದ್ದೇವೆ. ನಮ್ಮ ವಹಿವಾಟು ಸರಿಯಾಗಿದ್ದರೆ ವರ್ಷಕ್ಕೊಮ್ಮೆ ಸರ್ವ ಸದಸ್ಯರ ಸಭೆ ಕರೆದು ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಾಗುತ್ತದೆ. ಸದಸ್ಯರು ಸಕ್ರಿಯವಾಗಿ ವ್ಯವಹಾರಗಳಲ್ಲಿ ಭಾಗಿಯಾಗಬೇಕೆಂದು ಹೇಳಿದರು.

ವಿಶ್ವಮಾನವ ಅಲ್ಪಸಂಖ್ಯಾತರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಎಸ್.ರಶೀದ್, ನಿರ್ದೇಶಕರುಗಳಾದ ಸಿ.ಇಮಾಂಸಾಬ್, ಎಚ್.ಮೌಲಾನ ತಾಳವಟ್ಟಿ, ಇ.ಮಹಮದ್ ಅಲಿ, ಜಿ.ಸುಭಾನು, ಹೆಚ್.ಅಬ್ದುಲ್ ಲತೀಫ್, ಷೇಕ್‍ಬುಡೇನ್‍ಸಾಬ್, ಎಂ.ಜಿ.ಶಫಿವುಲ್ಲಾ, ಪಿ.ದಾದಾವಲಿ, ಪಿ.ಬಷೀರ್ ಅಹಮದ್, ಟಿ.ಮೆಹಬೂಬ್, ಜಿ.ದಾದಾಬುಡೇನ್‍ಸಾಬ್, ಎಂ.ಅಬ್ದುಲ್ ಕಲಾಂ, ಪಿ.ಸಲೀಮಾ, ಜಹರಾಬಿ, ಕಾರ್ಯದರ್ಶಿ ಕು.ಸಿಂಧು ವಿ. ವೇದಿಕೆಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...